ಮೈಸೂರು

ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿ ಆಕ್ಷೇಪ : ದಸರಾ ಜಾತಿ-ಧರ್ಮಕ್ಕೆ ಸೀಮಿತವಲ್ಲ ಎಂದ ಕಾಂಗ್ರೆಸ್‌

ಮೈಸೂರು : ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್ ಅವರು ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಸಂಬಂಧಿಸಿದಂತೆ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ವಾಕ್ಸಮರಕ್ಕೆ ಕಾರಣವಾಗಿದೆ.

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಸ್ವೀಕರಿಸುತ್ತಾರೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ. ಆದರೆ ಅವರು ನಂಬುತ್ತಾರೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ. ಇದು ನಾಡಹಬ್ಬವಾಗಿದ್ದು, ಒಂದು ಜಾತಿ ಅಥವಾ ಧರ್ಮಕ್ಕೆ ಸೀಮಿತವಾಗಿಲ್ಲ. ಎಲ್ಲರೂ ಸೇರಿಯೇ ಆಚರಿಸಬೇಕು ಎಂದು ಕಾಂಗ್ರೆಸ್ ನೇತೃತ್ವದ ಸರ್ಕಾರ ತಿರುಗೇಟು ನೀಡಿದೆ.

ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಶಾಸಕ ಬಿ.ವೈ. ವಿಜಯೇಂದ್ರ, ಬಾನು ಮುಷ್ತಾಕ್ ಅವರು ನಮ್ಮ ಹಿಂದೂ ಸಂಸ್ಕೃತಿ, ಸಂಪ್ರದಾಯಗಳು ಮತ್ತು ಆಚರಣೆಗಳನ್ನು ಒಪ್ಪಿಕೊಂಡು ಅವುಗಳಲ್ಲಿ ನಂಬಿಕೆ ಇಟ್ಟರೆ, ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಹೇಳಿದರು

ಬಾನು ಮುಷ್ತಾಕ್ ಮತ್ತು ಅನುವಾದಕಿ ಕೊಡಗಿನ ದೀಪಾ ಭಸ್ತಿ ಇಬ್ಬರೂ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದಿದ್ದಾರೆ. ರಾಜ್ಯ ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಜೊತೆಗೆ ಕೊಡಗಿನ ದೀಪಾ ಭಸ್ತಿ ಅವರನ್ನು ಆಹ್ವಾನಿಸಬೇಕಿತ್ತು. ಸಿದ್ದರಾಮಯ್ಯ ಅವರಿಗೆ ಕೊಡಗಿನ ಬಗ್ಗೆ ಹೆಚ್ಚು ಆಸಕ್ತಿ ಇಲ್ಲವೇ? ಎಂದು ವಿಜಯೇಂದ್ರ ಪ್ರಶ್ನಿಸಿದರು.

ಒಬ್ಬ ಬರಹಗಾರ್ತಿಯಾಗಿ, ನಾವು ಅವರನ್ನು ಗೌರವಿಸುತ್ತೇವೆ. ಆದರೆ, ಅವರು ನಮ್ಮ ಸಂಪ್ರದಾಯ, ಆಚರಣೆಗಳು ಅಥವಾ ಧಾರ್ಮಿಕ ಭಾವನೆಗಳನ್ನು ಒಪ್ಪಿಕೊಂಡಿದ್ದರೆ, ಅದು ಬೇರೆಯದೇ ವಿಷಯವಾಗುತ್ತಿತ್ತು. ಈ ಹಿಂದೆ, ಲೇಖಕ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿದ್ದರು ಎಂದು ಅವರು ಹೇಳಿದರು.

ಇನ್ನೂ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಜಿ. ಪರಮೇಶ್ವರ, ಸರ್ ಮಿರ್ಜಾ ಇಸ್ಲಾಮಿಯಲ್ ದಿವಾನರಾಗಿ ದಸರಾ ಮಾಡಿಲ್ಲವೇ? ಕವಿ ನಿಸಾರ್ ಅಹ್ಮದ್ ದಸರಾವನ್ನು ಉದ್ಘಾಟಿಸಿಲ್ಲವೇ? ಇದಕ್ಕೆಲ್ಲಾ ಆಕ್ಷೇಪ ವ್ಯಕ್ತಪಡಿಸಬಾರದು. ನಾವು ನಾಡ ಹಬ್ಬವನ್ನು ಆಚರಿಸುವಾಗ ಧರ್ಮ ಅಥವಾ ಜಾತಿಯನ್ನು ನೋಡುವುದಿಲ್ಲ. ಅಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದರು.

ಇದು ನಾಡ ಹಬ್ಬ, ಈ ನೆಲದ ಹಬ್ಬ. ಇದನ್ನು ಬಹಳ ಸಮಯದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ನೀವು ಧಾರ್ಮಿಕ ವಿಷಯಗಳನ್ನು ಏಕೆ ಇದರಲ್ಲಿ ತರುತ್ತಿದ್ದೀರಿ? ಸಮಾಜದ ಒಂದು ವರ್ಗವನ್ನು ಹೊರಗೆ ಇಟ್ಟುಕೊಂಡು ನೀವು ಹಬ್ಬವನ್ನು ಆಚರಿಸುತ್ತೀರಾ? ಎಂದು ಪರಮೇಶ್ವರ ಅವರು ಬಿಜೆಪಿಯನ್ನು ಪ್ರಶ್ನಿಸಿದರು.

ಆಂದೋಲನ ಡೆಸ್ಕ್

Recent Posts

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

1 hour ago

ಕಾಂಗೋದಲ್ಲಿ ಎಬೋಲಾ ಅಟ್ಟಹಾಸ: 1000 ಗಡಿ ದಾಟಿದ ಸೋಂಕಿತರ ಸಂಖ್ಯೆ

ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್‌ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…

3 hours ago

ಗಾಣಾಳು ಜಲಪಾತದಲ್ಲಿ ಈಜಲು ಹೋದ ಯುವಕ ಸಾವು

ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…

4 hours ago

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಶೀಘ್ರದಲ್ಲೇ ಬಸ್‌ ಪ್ರಯಾಣ ದರ ಹೆಚ್ಚಳ?

ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…

5 hours ago

ಎರಡೇ ವರ್ಷಕ್ಕೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ರಾಜೀನಾಮೆ

ಲಂಡನ್:‌ ನಿರೀಕ್ಷೆಯಂತೆ ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್‌ ಪಕ್ಷದೊಳಗೆ…

6 hours ago