ಮೈಸೂರು

ಬಿಜೆಪಿಗರನ್ನು ಚಡ್ಡಿಗಳು ಅಂತಿದ್ದೆವು : ಸಿಎಂ ಸಿದ್ದರಾಮಯ್ಯ

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಬಿಜೆಪಿಗರನ್ನು ನಾವೆಲ್ಲಾ ಮೊದಲು ಚಡ್ಡಿಗಳು ಅಂತಿದ್ದೆವು. ಇದೀಗ ಚಡ್ಡಿ ಧರಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ ಅಷ್ಟೇ ಎಂದಿದ್ದಾರೆ.

ನಿನ್ನೆ ಮಂಡ್ಯದಲ್ಲಿ ಬಿಜೆಪಿ ನಾಯಕರಾದ ಬಿ.ವೈ ವಿಜಯೇಂದ್ರ, ಅಶ್ವತ್ಥ್ ನಾರಾಯಣ್ ಅವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಕಾವೇರಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೆರೆಸುತ್ತಾ ಇರೋದು ದುರದೃಷ್ಟಕರ. ಇದು ರಾಜಕಾರಣದ ದೃಷ್ಟಿಯಿಂದ ಅಷ್ಟೇ. ಜನರಿಗಾಗಿ, ರಾಜ್ಯದ ಹಿತದೃಷ್ಟಿಯಿಂದ ಮಾಡುತ್ತಿಲ್ಲ. ಬಿಜೆಪಿಯವರನ್ನ ಮೊದಲೆಲ್ಲಾ ಚಡ್ಡಿಗಳೆಂದು ಕರೆಯುತ್ತಾ ಇದ್ದೆವು. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನ ರಾಜಕೀಯಗೊಳಿಸಲಾಗುತ್ತಿದೆ. ಪ್ರತಿಭಟನೆ ಮಾಡೋಕೆ ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಮ್ಮನ್ನು ಡಿಎಂಕೆಯ ಬಿ ಟೀಮ್ ಎಂದಿದ್ದಾರೆ. ಬಿಜೆಪಿ ಕೂಡ ಎಐಡಿಎಂಕೆ ಜೊತೆ ಇದ್ದರು. ರಾಜ್ಯದ ಹಿತಕ್ಕಾಗಿ ನಾವು ಎಂದೂ ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರ ಎಂದಿಗೂ ಮುಖ್ಯವಲ್ಲ. ರಾಜಕೀಯಕ್ಕಾಗಿ ಬಾಯಿಗೆ ಬಂದಂತೆ ಹೇಳಬಾರದು. ರಾಜ್ಯ ಸರ್ಕಾರಕ್ಕೆ ರೈತರ ಹಿತವೇ ಮುಖ್ಯ ಎಂದರು. ಕಾವೇರಿ ಹೋರಾಟಗಾರರ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ವಿರುದ್ಧ ಸುಪ್ರೀಂಕೋರ್ಟ್‌ ಆದೇಶವಿದೆ. ಅದಕ್ಕಾಗಿ ಬೆಂಗಳೂರಲ್ಲಿ ರಾಜ್ಯ ಸರ್ಕಾರ ಸೆಕ್ಷನ್ 144 ಜಾರಿಗೊಳಿಸಿದ್ದೇವೆ. ಪ್ರತಿಭಟನೆ ಮಾಡಲು ನನ್ನದೇನೂ ತಕರಾರಿಲ್ಲ. ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ ಬೇಡ ಎಂದಿದ್ದಾರೆ.

lokesh

Recent Posts

ತಿದ್ದುಪಡಿ ಮಸೂದೆಗೆ ಸೋಲು: ಕರಾಳ ಇತಿಹಾಸ ಮರುಕಳಿಸಲಿದೆ ಎಂದ ಎಚ್.ಡಿ.ಕುಮಾರಸ್ವಾಮಿ ಕಿಡಿ

ನವದೆಹಲಿ: ತಿದ್ದುಪಡಿ ಮಸೂದೆ ಸೋಲುವ ಮೂಲಕ ಲೋಕಸಭೆಯಲ್ಲಿ ಮೂವತ್ತು ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ ಎಂದು ಕೇಂದ್ರ…

30 mins ago

ಮೈಸೂರು| ತೃತೀಯ ಲಿಂಗಿಗೆ ಲೈಂಗಿಕ ಕಿರುಕುಳ, ಅಪಹರಣ ಯತ್ನ ಪ್ರಕರಣ: ಮೂವರ ಬಂಧನ

ಮೈಸೂರು: ನಗರದ ಮೇಟಗಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ…

1 hour ago

ಹನೂರು| ಕಾಡಾನೆ ದಾಳಿ: ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದ ಹಳ್ಳಿಕಾರ್‌ ಹೋರಿ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಳ್ಳಿಕಾರ್ ಹೋರಿಯ ಮೇಲೆ ಕಾಡಾನೆ…

2 hours ago

ಬನ್ನೇರುಘಟ್ಟ ಮೃಗಾಲಯಕ್ಕೆ ಆಫ್ರಿಕಾದಿಂದ ಬಂದ 4 ಚೀತಾ

ಆನೇಕಲ್:‌ ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ…

2 hours ago

ಬೇಸಿಗೆ ಆರಂಭದಲ್ಲೇ 99 ಅಡಿಗೆ ತಲುಪಿದ ಕೆಆರ್‌ಎಸ್‌ ಜಲಾಶಯ

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್‌ ನೀರಿನ ಮಟ್ಟ 99 ಅಡಿಗೆ ಕುಸಿದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದಲ್ಲಿ…

3 hours ago

ಸರಗೂರು| ಹೆಣ್ಣು ಹುಲಿ ಸೆರೆ: ನಿರಾಳರಾದ ಗ್ರಾಮಸ್ಥರು

ಸರಗೂರು: ತಾಲ್ಲೂಕಿನ ಹಾದನೂರು ಬಳಿ ಹಾಡಹಗಲೇ ಪ್ರತ್ಯಕ್ಷವಾಗಿದ್ದ 11 ವರ್ಷದ ಹೆಣ್ಣು ಹುಲಿಯನ್ನು ಕಳೆದ ರಾತ್ರಿ ಸುರಕ್ಷಿತವಾಗಿ ಸೆರೆ ಹಿಡಿಯಲಾಗಿದೆ.…

4 hours ago