ಮೈಸೂರು

ಬಿಜೆಪಿಗರನ್ನು ಚಡ್ಡಿಗಳು ಅಂತಿದ್ದೆವು : ಸಿಎಂ ಸಿದ್ದರಾಮಯ್ಯ

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಬಿಜೆಪಿಗರನ್ನು ನಾವೆಲ್ಲಾ ಮೊದಲು ಚಡ್ಡಿಗಳು ಅಂತಿದ್ದೆವು. ಇದೀಗ ಚಡ್ಡಿ ಧರಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ ಅಷ್ಟೇ ಎಂದಿದ್ದಾರೆ.

ನಿನ್ನೆ ಮಂಡ್ಯದಲ್ಲಿ ಬಿಜೆಪಿ ನಾಯಕರಾದ ಬಿ.ವೈ ವಿಜಯೇಂದ್ರ, ಅಶ್ವತ್ಥ್ ನಾರಾಯಣ್ ಅವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಕಾವೇರಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೆರೆಸುತ್ತಾ ಇರೋದು ದುರದೃಷ್ಟಕರ. ಇದು ರಾಜಕಾರಣದ ದೃಷ್ಟಿಯಿಂದ ಅಷ್ಟೇ. ಜನರಿಗಾಗಿ, ರಾಜ್ಯದ ಹಿತದೃಷ್ಟಿಯಿಂದ ಮಾಡುತ್ತಿಲ್ಲ. ಬಿಜೆಪಿಯವರನ್ನ ಮೊದಲೆಲ್ಲಾ ಚಡ್ಡಿಗಳೆಂದು ಕರೆಯುತ್ತಾ ಇದ್ದೆವು. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನ ರಾಜಕೀಯಗೊಳಿಸಲಾಗುತ್ತಿದೆ. ಪ್ರತಿಭಟನೆ ಮಾಡೋಕೆ ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಮ್ಮನ್ನು ಡಿಎಂಕೆಯ ಬಿ ಟೀಮ್ ಎಂದಿದ್ದಾರೆ. ಬಿಜೆಪಿ ಕೂಡ ಎಐಡಿಎಂಕೆ ಜೊತೆ ಇದ್ದರು. ರಾಜ್ಯದ ಹಿತಕ್ಕಾಗಿ ನಾವು ಎಂದೂ ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರ ಎಂದಿಗೂ ಮುಖ್ಯವಲ್ಲ. ರಾಜಕೀಯಕ್ಕಾಗಿ ಬಾಯಿಗೆ ಬಂದಂತೆ ಹೇಳಬಾರದು. ರಾಜ್ಯ ಸರ್ಕಾರಕ್ಕೆ ರೈತರ ಹಿತವೇ ಮುಖ್ಯ ಎಂದರು. ಕಾವೇರಿ ಹೋರಾಟಗಾರರ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ವಿರುದ್ಧ ಸುಪ್ರೀಂಕೋರ್ಟ್‌ ಆದೇಶವಿದೆ. ಅದಕ್ಕಾಗಿ ಬೆಂಗಳೂರಲ್ಲಿ ರಾಜ್ಯ ಸರ್ಕಾರ ಸೆಕ್ಷನ್ 144 ಜಾರಿಗೊಳಿಸಿದ್ದೇವೆ. ಪ್ರತಿಭಟನೆ ಮಾಡಲು ನನ್ನದೇನೂ ತಕರಾರಿಲ್ಲ. ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ ಬೇಡ ಎಂದಿದ್ದಾರೆ.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

3 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

4 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago