ಮೈಸೂರು

ಬಿಜೆಪಿಗರನ್ನು ಚಡ್ಡಿಗಳು ಅಂತಿದ್ದೆವು : ಸಿಎಂ ಸಿದ್ದರಾಮಯ್ಯ

ಮೈಸೂರು : ಕಾವೇರಿ ಹೋರಾಟದ ವಿಚಾರದಲ್ಲಿ ಬಿಜೆಪಿ, ಜೆಡಿಎಸ್‌ ನಾಯಕರ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಂಡಕಹಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ, ಕಾವೇರಿ ವಿಚಾರದಲ್ಲಿ ರಾಜಕೀಯ ಬೇಡ. ಪ್ರತಿಭಟನೆ ಮಾಡಲು ಎಲ್ಲರಿಗೂ ಅವಕಾಶವಿದೆ. ಬಿಜೆಪಿಗರನ್ನು ನಾವೆಲ್ಲಾ ಮೊದಲು ಚಡ್ಡಿಗಳು ಅಂತಿದ್ದೆವು. ಇದೀಗ ಚಡ್ಡಿ ಧರಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ ಅಷ್ಟೇ ಎಂದಿದ್ದಾರೆ.

ನಿನ್ನೆ ಮಂಡ್ಯದಲ್ಲಿ ಬಿಜೆಪಿ ನಾಯಕರಾದ ಬಿ.ವೈ ವಿಜಯೇಂದ್ರ, ಅಶ್ವತ್ಥ್ ನಾರಾಯಣ್ ಅವರ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು. ಕಾವೇರಿ ವಿಚಾರದಲ್ಲಿ ಬಿಜೆಪಿ ನಾಯಕರು ರಾಜಕೀಯ ಬೆರೆಸುತ್ತಾ ಇರೋದು ದುರದೃಷ್ಟಕರ. ಇದು ರಾಜಕಾರಣದ ದೃಷ್ಟಿಯಿಂದ ಅಷ್ಟೇ. ಜನರಿಗಾಗಿ, ರಾಜ್ಯದ ಹಿತದೃಷ್ಟಿಯಿಂದ ಮಾಡುತ್ತಿಲ್ಲ. ಬಿಜೆಪಿಯವರನ್ನ ಮೊದಲೆಲ್ಲಾ ಚಡ್ಡಿಗಳೆಂದು ಕರೆಯುತ್ತಾ ಇದ್ದೆವು. ರಾಜಕೀಯ ಲಾಭಕ್ಕಾಗಿ ಕಾವೇರಿ ವಿಚಾರವನ್ನ ರಾಜಕೀಯಗೊಳಿಸಲಾಗುತ್ತಿದೆ. ಪ್ರತಿಭಟನೆ ಮಾಡೋಕೆ ನಮ್ಮ ತಕರಾರು ಇಲ್ಲ. ಆದರೆ ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರ ಹೇಳಿಕೆಗೂ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಮ್ಮನ್ನು ಡಿಎಂಕೆಯ ಬಿ ಟೀಮ್ ಎಂದಿದ್ದಾರೆ. ಬಿಜೆಪಿ ಕೂಡ ಎಐಡಿಎಂಕೆ ಜೊತೆ ಇದ್ದರು. ರಾಜ್ಯದ ಹಿತಕ್ಕಾಗಿ ನಾವು ಎಂದೂ ಹಿಂದೆ ಬಿದ್ದಿಲ್ಲ. ನಮಗೆ ಅಧಿಕಾರ ಎಂದಿಗೂ ಮುಖ್ಯವಲ್ಲ. ರಾಜಕೀಯಕ್ಕಾಗಿ ಬಾಯಿಗೆ ಬಂದಂತೆ ಹೇಳಬಾರದು. ರಾಜ್ಯ ಸರ್ಕಾರಕ್ಕೆ ರೈತರ ಹಿತವೇ ಮುಖ್ಯ ಎಂದರು. ಕಾವೇರಿ ಹೋರಾಟಗಾರರ ಬಗ್ಗೆಯೂ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಭಟನೆ ವಿರುದ್ಧ ಸುಪ್ರೀಂಕೋರ್ಟ್‌ ಆದೇಶವಿದೆ. ಅದಕ್ಕಾಗಿ ಬೆಂಗಳೂರಲ್ಲಿ ರಾಜ್ಯ ಸರ್ಕಾರ ಸೆಕ್ಷನ್ 144 ಜಾರಿಗೊಳಿಸಿದ್ದೇವೆ. ಪ್ರತಿಭಟನೆ ಮಾಡಲು ನನ್ನದೇನೂ ತಕರಾರಿಲ್ಲ. ರಾಜಕೀಯ ಲಾಭಕ್ಕಾಗಿ ಪ್ರತಿಭಟನೆ ಬೇಡ ಎಂದಿದ್ದಾರೆ.

lokesh

Recent Posts

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

2 hours ago

ಓದುಗರ ಪತ್ರ: ಒಡೆಯರ್ ಪೋಸ್ಟ್ ಕಾರ್ಡ್ ಬಿಡುಗಡೆ ಶ್ಲಾಘನೀಯ

ಭಾರತೀಯ ಅಂಚೆ ಹಾಗೂ ಕರ್ನಾಟಕ ಅಂಚೆ ಚೀಟಿ ಸಂಗ್ರಹಣಾ ಸಂಘವು ಆಧುನಿಕ ಮೈಸೂರು ನಿರ್ಮಾಣಕ್ಕೆ ಮಹತ್ವದ ಕೊಡುಗೆ ನೀಡಿರುವ ಮೈಸೂರು…

2 hours ago

ಓದುಗರ ಪತ್ರ: ಮೈಸೂರು ದಟ್ಟಗಳ್ಳಿಯ ಪಿನ್ ಕೋಡ್ ಸಮಸ್ಯೆ ನಿವಾರಿಸಿ

ಮೈಸೂರಿನ ದಟ್ಟಗಳ್ಳಿ ೩ ನೇ ಹಂತದ ಕನಕದಾಸನಗರವು, ಬಡಾವಣೆ ನಿರ್ಮಾಣವಾದ ಆರಂಭದಲ್ಲಿ ರಾಮಕೃಷ್ಣ ನಗರ ಉಪ ಅಂಚೆ ಕಚೇರಿಗೆ ಸೇರಿತ್ತು.…

2 hours ago

ಮಳೆಗಾಲದ ಸವಾಲು ಎದುರಿಸಲು ಸೆಸ್ಕ್ ಸಜ್ಜು

ಪುನೀತ್ ಮಡಿಕೇರಿ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ; ಅಗತ್ಯವಿರುವಷ್ಟು ವಿದ್ಯುತ್ ಕಂಬಗಳು, ಪರಿವರ್ತಕಗಳು, ವಾಹಕಗಳ ದಾಸ್ತಾನು ಮಡಿಕೇರಿ: ಗುಡ್ಡಗಾಡು ಪ್ರದೇಶವಾಗಿರುವ ಕೊಡಗು…

2 hours ago

ರಸ್ತೆ ಇಲ್ಲದೆ ಯೋಧನ ಕುಟುಂಬ ಪರದಾಟ

ಮಹೇಶ್ ಕರೋಠಿ ಮುಚ್ಚಿರುವ ರಸ್ತೆಯನ್ನು ಪುನಃ ತೆರೆದು ಸಮಸ್ಯೆ ಬಗೆಹರಿಸಬೇಕೆಂದು ಗ್ರಾಮಸ್ಥರ ಒತ್ತಾಯ ಕಿಕ್ಕೇರಿ: ಜಮ್ಮು-ಕಾಶ್ಮೀರದ ಗಡಿಯಲ್ಲಿ ದೇಶದ ಭದ್ರತೆಗಾಗಿ…

2 hours ago

ಕುತೂಹಲ ಮೂಡಿಸಿದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ

ಮಂಜು ಕೋಟೆ ಕೋಟೆ: ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳಲ್ಲಿ ಪೈಪೋಟಿ; ಮುಖಂಡರಿಗೆ ಪ್ರತಿ ಎಚ್.ಡಿ.ಕೋಟೆ: ಕ್ಷೇತ್ರದ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ…

2 hours ago