ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ.
ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ.
ಬೆಳೆದಿರುವ ಭತ್ತದ ಬೆಳೆಯ ಗರಿ ಸಂಪೂರ್ಣ ಒಣಗಿ ಹೋಗಿ ಹಳದಿ ಬಣ್ಣಕ್ಕೆ ತಿರುಗಿದ್ದು, ಭತ್ತ ಮುಂದಿನ ದಿನಗಳಲ್ಲಿ ಜೊಳ್ಳಾಗುವ ಆತಂಕ ಮನೆಮಾಡಿದೆ.
ಕಳೆದ ವರ್ಷ ಮಳೆ ಕಡಿಮೆಯಾಗಿ ಕಾಲುವೆಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾಗಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ನಾಲೆಗಳಿಗೂ ಕೂಡ ನೀರನ್ನು ಬಿಡಲಾಗಿದೆ. ಪರಿಣಾಮ ಈ ಬಾರಿ ಜಾಸ್ತಿ ಬೆಳೆ ಬೆಳೆಯಬಹುದು ಎಂಬ ಅಂದಾಜಿನಲ್ಲಿದ್ದ ರೈತರು, ಈ ಬೆಂಕಿ ರೋಗದಿಂದ ತೀವ್ರ ಕಂಗಾಲಾಗಿದ್ದಾರೆ.
ಈ ಬಾರಿಯ ಬೆಳೆಯಿಂದ ಸಾಲವನ್ನು ತೀರಿಸಿಕೊಳ್ಳಬಹುದು ಎಂದು ಅಂದಾಜು ಮಾಡಿದ್ದ ರೈತರು ಈಗ ದಿಕ್ಕು ತೋಚದೇ ಕಂಗಾಲಾಗಿದ್ದಾರೆ ಎನ್ನಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…