ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ.
ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ.
ಬೆಳೆದಿರುವ ಭತ್ತದ ಬೆಳೆಯ ಗರಿ ಸಂಪೂರ್ಣ ಒಣಗಿ ಹೋಗಿ ಹಳದಿ ಬಣ್ಣಕ್ಕೆ ತಿರುಗಿದ್ದು, ಭತ್ತ ಮುಂದಿನ ದಿನಗಳಲ್ಲಿ ಜೊಳ್ಳಾಗುವ ಆತಂಕ ಮನೆಮಾಡಿದೆ.
ಕಳೆದ ವರ್ಷ ಮಳೆ ಕಡಿಮೆಯಾಗಿ ಕಾಲುವೆಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾಗಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ನಾಲೆಗಳಿಗೂ ಕೂಡ ನೀರನ್ನು ಬಿಡಲಾಗಿದೆ. ಪರಿಣಾಮ ಈ ಬಾರಿ ಜಾಸ್ತಿ ಬೆಳೆ ಬೆಳೆಯಬಹುದು ಎಂಬ ಅಂದಾಜಿನಲ್ಲಿದ್ದ ರೈತರು, ಈ ಬೆಂಕಿ ರೋಗದಿಂದ ತೀವ್ರ ಕಂಗಾಲಾಗಿದ್ದಾರೆ.
ಈ ಬಾರಿಯ ಬೆಳೆಯಿಂದ ಸಾಲವನ್ನು ತೀರಿಸಿಕೊಳ್ಳಬಹುದು ಎಂದು ಅಂದಾಜು ಮಾಡಿದ್ದ ರೈತರು ಈಗ ದಿಕ್ಕು ತೋಚದೇ ಕಂಗಾಲಾಗಿದ್ದಾರೆ ಎನ್ನಲಾಗಿದೆ.
ಬೆಂಗಳೂರು : ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ. ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…