ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ.
ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ.
ಬೆಳೆದಿರುವ ಭತ್ತದ ಬೆಳೆಯ ಗರಿ ಸಂಪೂರ್ಣ ಒಣಗಿ ಹೋಗಿ ಹಳದಿ ಬಣ್ಣಕ್ಕೆ ತಿರುಗಿದ್ದು, ಭತ್ತ ಮುಂದಿನ ದಿನಗಳಲ್ಲಿ ಜೊಳ್ಳಾಗುವ ಆತಂಕ ಮನೆಮಾಡಿದೆ.
ಕಳೆದ ವರ್ಷ ಮಳೆ ಕಡಿಮೆಯಾಗಿ ಕಾಲುವೆಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾಗಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ನಾಲೆಗಳಿಗೂ ಕೂಡ ನೀರನ್ನು ಬಿಡಲಾಗಿದೆ. ಪರಿಣಾಮ ಈ ಬಾರಿ ಜಾಸ್ತಿ ಬೆಳೆ ಬೆಳೆಯಬಹುದು ಎಂಬ ಅಂದಾಜಿನಲ್ಲಿದ್ದ ರೈತರು, ಈ ಬೆಂಕಿ ರೋಗದಿಂದ ತೀವ್ರ ಕಂಗಾಲಾಗಿದ್ದಾರೆ.
ಈ ಬಾರಿಯ ಬೆಳೆಯಿಂದ ಸಾಲವನ್ನು ತೀರಿಸಿಕೊಳ್ಳಬಹುದು ಎಂದು ಅಂದಾಜು ಮಾಡಿದ್ದ ರೈತರು ಈಗ ದಿಕ್ಕು ತೋಚದೇ ಕಂಗಾಲಾಗಿದ್ದಾರೆ ಎನ್ನಲಾಗಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…