ಮೈಸೂರು: ಭತ್ತದ ಗದ್ದೆಗಳಲ್ಲಿ ಬೆಂಕಿ ರೋಗ ಕಾಣಿಸಿಕೊಂಡಿರುವ ಪರಿಣಾಮ ರೈತರಿಗೆ ಮತ್ತೊಂದು ಆತಂಕ ಮನೆಮಾಡಿದೆ.
ಹುಣಸೂರು ತಾಲ್ಲೂಕಿನ ಹನಗೋಡು ನಾಲೆ ವ್ಯಾಪ್ತಿಗೆ ಬರುವ ಎಲ್ಲಾ ಗದ್ದೆಗಳಲ್ಲಿ ಈ ಸಮಸ್ಯೆ ಕಂಡುಬಂದಿದ್ದು, ರೈತರು ಫಸಲು ನಷ್ಟವಾಗುವ ಆತಂಕದಲ್ಲಿದ್ದಾರೆ.
ಬೆಳೆದಿರುವ ಭತ್ತದ ಬೆಳೆಯ ಗರಿ ಸಂಪೂರ್ಣ ಒಣಗಿ ಹೋಗಿ ಹಳದಿ ಬಣ್ಣಕ್ಕೆ ತಿರುಗಿದ್ದು, ಭತ್ತ ಮುಂದಿನ ದಿನಗಳಲ್ಲಿ ಜೊಳ್ಳಾಗುವ ಆತಂಕ ಮನೆಮಾಡಿದೆ.
ಕಳೆದ ವರ್ಷ ಮಳೆ ಕಡಿಮೆಯಾಗಿ ಕಾಲುವೆಯಲ್ಲಿ ನೀರಿನ ಹರಿವು ತೀವ್ರ ಕಡಿಮೆಯಾಗಿತ್ತು. ಆದರೆ ಈ ಬಾರಿ ಉತ್ತಮ ಮಳೆಯಾಗಿ ಲಕ್ಷ್ಮಣತೀರ್ಥ ನದಿಯಲ್ಲಿ ಪ್ರವಾಹ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ನಾಲೆಗಳಿಗೂ ಕೂಡ ನೀರನ್ನು ಬಿಡಲಾಗಿದೆ. ಪರಿಣಾಮ ಈ ಬಾರಿ ಜಾಸ್ತಿ ಬೆಳೆ ಬೆಳೆಯಬಹುದು ಎಂಬ ಅಂದಾಜಿನಲ್ಲಿದ್ದ ರೈತರು, ಈ ಬೆಂಕಿ ರೋಗದಿಂದ ತೀವ್ರ ಕಂಗಾಲಾಗಿದ್ದಾರೆ.
ಈ ಬಾರಿಯ ಬೆಳೆಯಿಂದ ಸಾಲವನ್ನು ತೀರಿಸಿಕೊಳ್ಳಬಹುದು ಎಂದು ಅಂದಾಜು ಮಾಡಿದ್ದ ರೈತರು ಈಗ ದಿಕ್ಕು ತೋಚದೇ ಕಂಗಾಲಾಗಿದ್ದಾರೆ ಎನ್ನಲಾಗಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…