ಮೈಸೂರು

ವಿಮಾನದಲ್ಲಿ ಪ್ರಯಾಣಿಸಿ ಸಂಭ್ರಮಿಸಿದ ಅಂಧ ಮಕ್ಕಳು

ಮೈಸೂರಿನಿಂದ ಬೆಂಗಳೂರು ವಿಮಾನ ನಿಲ್ದಾಣದ ತನಕ ಪ್ರಯಾಣ ಬೆಳೆಸಿದ ದಿವ್ಯ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನ ಮಕ್ಕಳು

ಮೈಸೂರಿನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪಯಣ

ಮೈಸೂರು: ಹಣವುಳ್ಳವರು ತಮ್ಮ ಮಕ್ಕಳ ಆಸೆಯನ್ನು ಪೂರೈಸಲು ಲಕ್ಷಾಂತರ ರೂ. ವ್ಯಯಿಸಿ ದೇಶ-ವಿದೇಶ ಪ್ರಯಾಣಕ್ಕೆ ಕಳುಹಿಸುವುದು ಸಾಮಾನ್ಯ. ಆದರೆ, ಸಮಾಜದಲ್ಲಿ ನೆಲೆ ಕಂಡುಕೊಳ್ಳಲು ಪರದಾಡುವ ಅಂಧ ಮಕ್ಕಳನ್ನು ಮೈಸೂರಿನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ತನಕ ವಿಮಾನದಲ್ಲಿ ಕರೆದೊಯ್ದು ಅವರ ಆಸೆಯನ್ನು ಪೂರೈಸಿರುವುದು ವಿಶೇಷ.

ವಿಮಾನದಲ್ಲಿ ಒಂದು ಬಾರಿಯಾದರೂ ಪ್ರಯಾಣಿಸಬೇಕೆಂಬ ಅಂಧ ಮಕ್ಕಳ ಕನಸನ್ನು ದಾನಿಗಳ ನೆರವಿನೊಂದಿಗೆ ದಿವ್ಯದೀಪ ಚಾರಿಟಬಲ್ ಟ್ರಸ್ಟ್ ನೆನಸಾಗಿಸಿದ್ದು, ಆ ಮೂಲಕ ಮಕ್ಕಳ ಬದುಕಿನಲ್ಲಿ ಮರೆಯಲಾಗದ ದಿನವನ್ನು ದಾಖಲಿಸಿದೆ. ಮೈಸೂರಿನ ದಟ್ಟಗಳ್ಳಿ ಮೂರನೇ ಹಂತದ ವರ್ತುಲ ರಸ್ತೆ ಬಳಿ ಇರುವ ದಿವ್ಯ ಜ್ಯೋತಿ ಚಾರಿಟಬಲ್ ಟ್ರಸ್ಟ್‌ನಲ್ಲಿ ಆಶ್ರಯ ಪಡೆದು ವ್ಯಾಸಂಗ ಮಾಡುತ್ತಿರುವ ಅಂಧ ಮಕ್ಕಳಿಗಾಗಿ ಈ ತನಕ ಚಾಮುಂಡಿಬೆಟ್ಟಕ್ಕೆ ಟ್ರಕ್ಕಿಂಗ್, ಗಣಪತಿ ಸಚ್ಚಿದಾನಂದ ಆಶ್ರಮದ ಶುಕವನದಲ್ಲಿರುವ ಪಕ್ಷಿಗಳ ಸ್ಪರ್ಶ, ಶ್ರೀರಂಗಪಟ್ಟಣದ ಪಕ್ಷಿಧಾಮದಲ್ಲಿನ ದೋಣಿವಿಹಾರ, ಜಿಆರ್‌ಎಸ್ ಫ್ಯಾಂಟಿಸಿ ಪಾರ್ಕ್‌ನ ಮನರಂಜನೆಯ  ಆಟ, ಸ್ಟಾರ್ ಹೋಟೆಲ್‌ನಲ್ಲಿ ಊಟದ ವ್ಯವಸ್ಥೆ, ಟ್ಯಾನ್‌ಡಂ ಸೈಕಲ್‌ನಲ್ಲಿ ಬೈಸಿಕಲ್ ತುಳಿಯುವ ಅನುಭವ ಒದಗಿಸಲಾಗಿದೆ.

ಈ ಬಾರಿ ಆಕಾಶದಲ್ಲಿ ಹಾರಬೇಕೆಂಬ ಮಕ್ಕಳ ಮನದಾಸೆಯನ್ನು ಈಡೇರಿಸಲು ಮುಂದಾದ ಸಂಸ್ಥೆ ಶುಕ್ರವಾರ ಸಂಸ್ಥೆಯಲ್ಲಿರುವ 36 ವಿದ್ಯಾರ್ಥಿನಿಯರು, ಹದಿನೈದು ಮಂದಿ ಸಹಾಯಕರಿಗೆ ವಿಮಾನ ಪ್ರಯಾಣ ವ್ಯವಸ್ಥೆ ಮಾಡಿತ್ತು. ವಿದ್ಯಾರ್ಥಿನಿಯರು  ಮಂಡಕಳ್ಳಿ ವಿವಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಅಲ್ಲಿ ತಮ್ಮ ಗುರುತಿನ ಚೀಟಿ ಹಾಗೂ ಟಿಕೆಟ್ ತೋರಿಸಿ ನಿಲ್ದಾಣ ಪ್ರವೇಶ ಪಡೆದು ಅಲ್ಲಿಂದ ಬೋರ್ಡಿಂಗ್ ಪಾಸ್ ಪಡೆದು ಚೆಕ್ಕಿಂಗ್ ಆಗಿ ವಿಮಾನ ಏರಿದರು.

ಈ ಎಲ್ಲ ಅನುಭವಗಳನ್ನು ಸ್ವತಃ ಅವರೇ ಪಡೆಯುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೆಂಗಳೂರಿನ ಅಂತಾರಾಷ್ಟ್ರೀಯ  ವಿಮಾನ ನಿಲ್ದಾಣದಲ್ಲಿ ವಿದೇಶಿ ಹಣಕಾಸು ವಿನಿಮಯ, ಸರಕು ಸಾಗಾಣಿಕೆ ವಿಮಾನಗಳ ಪರಿಚಯ, ಅವುಗಳ ಕಾರ್ಯವೈಖರಿ ಬಗ್ಗೆ ಮಾಹಿತಿ ನೀಡಲಾಯಿತು. ಈ ಸಂದರ್ಭದಲ್ಲಿ ಸ್ವಯಂ ಸೇವಕರು ಕಣ್ಣಿಗೆ ಬಟ್ಟೆಕಟ್ಟಿಕೊಂಡು ಅಂಧರು ಅನುಭವಿಸುವ ಕಷ್ಟಗಳನ್ನು ಖುದ್ದು ತಾವೇ ಅನುಭವಿಸಿದರು.

ಯಾನದ ಸಂದರ್ಭದಲ್ಲಿ ಸ್ವಯಂ ಸೇವಕರು ಅಂಧರಿಗೆ ವಿಮಾನದಲ್ಲಿನ ವೈಶಿಷ್ಟೆತೆಗಳನ್ನು ವಿವರಿಸಿದರು. ವಿಮಾನ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆಗಳು, ಗಗನ ಸಖಿುಯರು ನೀಡುತ್ತಿದ್ದ ಸಂದೇಶಗಳನ್ನು ಅನುಸರಿಸಿದರು. ಯಾನದ ಅಂತ್ಯದಲ್ಲಿ ಗಗನಸಖಿಯರು, ಪೈಲಟ್, ಕೋ ಪೈಲಟ್‌ಗಳ ಪರಿಚಯ ಮಾಡಿಕೊಡಲಾಯಿತು.

ನನ್ನ ಆಸೆಗಳನ್ನು ಈಡೇರಿಸಿಕೊಳ್ಳುವುದು ಕಷ್ಟ ಎಂಬ ಅರಿವಿತ್ತು. ನಾನು ಬಾಲ್ಯ ಕಳೆದಿದ್ದು ಅಜ್ಜಿ ಮನೆಯಲ್ಲಿ. ಅಪ್ಪ ಅಮ್ಮ ತೀರಿಹೋದ ಮೇಲೆ ಬದುಕಿನ ಆಸೆೆಯೇ ಬತ್ತಿ ಹೋಗಿತ್ತು. ನಾನು ಓದಬೇಕು, ಸೈಕಲ್ ಓಡಿಸಬೇಕು, ವಿಮಾನದಲ್ಲಿ ಹಾರಬೇಕು ಎನ್ನುವ ಆಸೆ ಇತ್ತು. ನನ್ನ ಕನಸುಗಳನ್ನು ದಿವ್ಯಜ್ಯೋತಿ ಚಾರಿಟಬಲ್ ಟ್ರಸ್ಟ್ ನನಸು ಮಾಡಿದೆ. ಇದು ನನಗೆ ಮರೆಯಲಾಗದ ದಿನವಾಗಿದೆ.

-ಮಂಜುಳಾ, ಅಂಧ ವಿದ್ಯಾರ್ಥಿನಿ.

ಅಂಧ ಬಾಲಕಿಯರಿಗೆ ಆಸರೆ ನೀಡಿ, ಅವರ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಸೃಷ್ಟಿಸಿ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ದಿವ್ಯ ಜ್ಯೋತಿ ಚಾರಿಟಬಲ್ ಟ್ರಸ್ಟ್ ಹೆಗಲಾಗಿದೆ. ಪದವಿಪೂರ್ವ ಶಿಕ್ಷಣ ಪಡೆಯಲಿಚ್ಛಿಸುವ ಅಂಧ ವಿದ್ಯಾರ್ಥಿಗಳು ಟ್ರಸ್ಟನ್ನು ಸಂಪರ್ಕಿಸಬಹುದು. ಇಲ್ಲಿ ಎಲ್ಲವೂ ಉಚಿತವಾಗಿ ದೊರೆಯಲ್ಲಿದ್ದು ದಾನಿಗಳು, ಸಂಘ ಸಂಸ್ಥೆಗಳು, ಸಾಮಾಜಿಕ ಹೊಣೆಗಾರಿಕೆ ಹೊರುವ ಕೈಗಾರಿಕೆಗಳ ಸಹಕಾರ ಮತ್ತು ಸಹಾಯದಿಂದ ಅಂಧ ಮಕ್ಕಳಿಗಾಗಿ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತದೆ.

-ಎಂ.ಎಂ.ಶಿವಪ್ರಕಾಶ್, ಮ್ಯಾನೇಜಿಂಗ್ ಟ್ರಸ್ಟಿ, ದಿವ್ಯಜ್ಯೋತಿ ಚಾರಿಟಬಲ್ ಟ್ರಸ್ಟ್

 

ಮೈಸೂರಿನಿಂದ ಬೆಂಗಳೂರಿಗೆ ವಿಮಾನ ಯಾಕೆ ಇಷ್ಟು ಬೇಗ ಬಂದು ಬಿಟ್ಟಿತು ಅನ್ನಿಸಿತು. ವಿಮಾನ ಪ್ರಯಾಣ ಅಂದರೆ ಮನಸ್ಸಿನಲ್ಲಿ ಏನೋ ಆತಂಕ ಇತ್ತು. ಆದರೆ, ವಿಮಾನದಲ್ಲಿ ಬಂದ ಮೇಲೆ ತುಂಬಾ ಸಂತೋಷವಾಯಿತು.

-ಮಾಲತಿ, ವಿದ್ಯಾರ್ಥಿನಿ.

andolana

Recent Posts

ಹಂಪಿ | ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ : ಮೂವರಿಗೆ ಮರಣದಂಡನೆ

ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ…

36 mins ago

ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ : 7 ಕಾರ್ಮಿಕರು ಸಜೀವ ದಹನ, ಹಲವರು ಸಿಲುಕಿರುವ ಶಂಕೆ

ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ…

49 mins ago

ಜೆಡಿಎಸ್‌ : ಪಕ್ಷ ಸಂಘಟನೆಗೆ ಫೆ.18 ರಿಂದ ʻಜನರೊಂದಿಗೆ ಜನತಾದಳʻ ಕಾರ್ಯಕ್ರಮ

ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು…

1 hour ago

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಗೊಂದಲಗಳಿಲ್ಲ: ಸಚಿವ ಎಚ್.ಸಿ.ಮಹದೇವಪ್ಪ

ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್‌ ಹೈಕಮಾಂಡ್‌ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ…

3 hours ago

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ…

3 hours ago

ನಾಳೆ ವರ್ಷದ ಮೊದಲ ಕಂಕಣ ಸೂರ್ಯಗ್ರಹಣ: ಎಲ್ಲೆಲ್ಲಿ ಗೋಚರ?

ಬೆಂಗಳೂರು: ವರ್ಷದ ಮೊದಲ ಕಂಕಣ ಸೂರ್ಯಗ್ರಹಣ ನಾಳೆ ಸಂಭವಿಸಲಿದೆ.. ಇದನ್ನ ರಿಂಗ್ ಆಫ್ ಫೈರ್ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ಕಂಕಣ…

3 hours ago