ಮೈಸೂರು

ಮೈಸೂರು ಜಿಲ್ಲೆಯ ಪ್ರವಾಸಿ ತಾಣಗಳ ಪ್ರಚಾರಕ್ಕೆ ಬ್ಲಾಗರ್ಸ್ ಮೀಟ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವು ಅಕ್ಟೋಬರ್ 3 ರಿಂದ ಅಕ್ಟೋಬರ್ 12 ರವರೆಗೆ  ನಡೆಯಲಿದ್ದು, ಪ್ರವಾಸೋದ್ಯಮ ಇಲಾಖೆಯು ಸಾಮಾಜಿಕ ಜಾಲತಾಣಗಳನ್ನು ಕೇಂದ್ರೀಕರಿಸಿ ‘ಡಿಸ್ಕವರ್ ಮೈಸೂರು’ ಉಪಕ್ರಮದ ಮೂಲಕ ಪ್ರಚಾರ ಅಭಿಯಾನವನ್ನು ಪ್ರಾರಂಭಿಸಿದೆ.

ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯ, ರಾಜ್ಯ ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಟೂರಿಸಂ ಸೊಸೈಟಿ (ಕೆಟಿಎಸ್‌) ಸಹಯೋಗದಲ್ಲಿ ಮೈಸೂರಿನ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಎತ್ತಿ ತೋರಿಸುವುದು ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಸಲುವಾಗಿ ಇಂದು ಬ್ಲಾಗರ್ ಗಳ ತಂಡ ಸೋಮನಾಥಪುರದ ಚೆನ್ನಕೇಶವ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದ ಇತಿಹಾಸ ಹಾಗೂ ವಾಸ್ತು ಶಿಲ್ಪದ ಬಗ್ಗೆ ಗೈಡ್ ಗಳಿಂದ ಮಾಹಿತಿ ಪಡೆದು ದೇವಸ್ಥಾನದ ಶಿಲ್ಪ ಕಲೆ ಹಾಗೂ ಕೆತ್ತನೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆ ಜಂಟಿ ನಿರ್ದೇಶಕರಾದ ಎಂ.ಕೆ.ಸವಿತಾ ಅವರು ಬ್ಲಾಗರ್ ಗಳನ್ನು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದ ಪ್ರಾದೇಶಿಕ ಆಯುಕ್ತರಾದ ಫಾರುಕ್ ಅಹಮದ್, ಸಹಾಯಕ ನಿರ್ದೇಶಕರಾದ ಕೇದಾರ್ ನಾಥ್ , ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ದಸರಾ ವಸ್ತುಪ್ರದರ್ಶನ ಕಾರ್ಯನಿರ್ವಹಣಾಧಿಕಾರಿ ರುದ್ರೇಶ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸುದರ್ಶನ್, ಹೋಟೆಲ್ ಅಸೋಸಿಯೇಷನ್ ಅಧ್ಯಕ್ಷ ನಾರಾಯಣ ಗೌಡ, ಸೇಫ್ ವೀಲ್ ಚೇರ್ ಮೆನ್ ಪ್ರಶಾಂತ್ , ಗೈಡ್ ಅಸೋಸಿಯೇಷನ್ ಅಧ್ಯಕ್ಷರಾದ ಅಶೋಕ್ ಹಾಗೂ ಇತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

10 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

11 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

15 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

16 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

22 hours ago