ಮೈಸೂರು

ತಂದೆಯವರ ನೆನಪಿನಲ್ಲಿ ಪ್ರತಿ ವರ್ಷವೂ ರಕ್ತದಾನ : ದರ್ಶನ್‌ ಧ್ರುವ ನಾರಾಯಣ್

ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್‌ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು.
ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್‌ ರಕ್ತದಾದ ಶಿಬಿರಕ್ಕೆ ದರ್ಶನ್‌ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು ರಕ್ತದಾನ ಶ್ರೇಷ್ಠದಾನ ಇದರಿಂದ ಹಲವಾರು ಜೀವಗಳನ್ನು ಉಳಿಸಬಹುದು ತುರ್ತು ಸಂದರ್ಭದಲ್ಲಿ ಪ್ರಾಣಾಪಾಯದಲ್ಲಿರುವವರ ಜೀವ ಉಳೀಸಲು ರಕ್ತ ಬಹಳ ಮುಖ್ಯ, ನಮ್ಮ ತಂದೆಯವರ ನೆನಪಿನಲ್ಲಿ ಇಂತಹ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವ ನಂಜನಗೂಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ.ಮುಂದೆಯೂ ಕೂಡ ನಮ್ಮ ತಂದೆಯವರ ನೆನಪಿನಲ್ಲಿ ಪ್ರತಿ ವರ್ಷ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ನಮ್ಮ ತಂದೆಯವರು ಕೂಡ ಅಪರೂಪದ ಎ.ಬಿ ಪಾಸಿಟಿವ್‌ ರಕ್ತದ ಗುಂಪನ್ನ ಹೊಂದಿದ್ದರು,ಅವರ ಹೆಸರಿನಲ್ಲಿ ಈ ರೀತಿ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.ಇದೇ ವೇಳೆ ದರ್ಶನ್‌ ಅವರು ಧ್ರುವನಾರಾಯಣ್ ಅವರ  ನೆನಪಿಗಾಗಿ ವಿವಿಧ ಬಗೆಯ ಸಸಿಗಳನ್ನು ಕಾರ್ಯಕರ್ತರಿಗೆ ವಿತರಣೆ ಮಾಡಿದರು.

ಧ್ರುವನಾರಾಯಣ್ ಅಭಿಮಾನಿಗಳು ಹಾಗೂ ಲಯನ್ಸ್ ಜೀವಧಾರ‌ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದ ಸುಮಾರು 150 ಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನದ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್ ,ಶಂಕರ್, ಶ್ರೀಕಂಠ ನಾಯಕ,ಮುಖಂಡರಾದ ಮಂಜುನಾಥ್,ಗೋವಿಂದ್ ರಾಜ್ ನಾಗರಾಜಯ್ಯ, ಧ್ರುವ ನಾರಾಯಣ್ ಅವರ ಅಭಿಮಾನಿ ಬಳಗದ ಯುವಕರು,ನಗರಸಭಾ ಸದಸ್ಯರು ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.

lokesh

Recent Posts

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

2 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

2 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

2 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

2 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

2 hours ago

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…

2 hours ago