ಮೈಸೂರು

ತಂದೆಯವರ ನೆನಪಿನಲ್ಲಿ ಪ್ರತಿ ವರ್ಷವೂ ರಕ್ತದಾನ : ದರ್ಶನ್‌ ಧ್ರುವ ನಾರಾಯಣ್

ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್‌ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು.
ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್‌ ರಕ್ತದಾದ ಶಿಬಿರಕ್ಕೆ ದರ್ಶನ್‌ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು ರಕ್ತದಾನ ಶ್ರೇಷ್ಠದಾನ ಇದರಿಂದ ಹಲವಾರು ಜೀವಗಳನ್ನು ಉಳಿಸಬಹುದು ತುರ್ತು ಸಂದರ್ಭದಲ್ಲಿ ಪ್ರಾಣಾಪಾಯದಲ್ಲಿರುವವರ ಜೀವ ಉಳೀಸಲು ರಕ್ತ ಬಹಳ ಮುಖ್ಯ, ನಮ್ಮ ತಂದೆಯವರ ನೆನಪಿನಲ್ಲಿ ಇಂತಹ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವ ನಂಜನಗೂಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ.ಮುಂದೆಯೂ ಕೂಡ ನಮ್ಮ ತಂದೆಯವರ ನೆನಪಿನಲ್ಲಿ ಪ್ರತಿ ವರ್ಷ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ನಮ್ಮ ತಂದೆಯವರು ಕೂಡ ಅಪರೂಪದ ಎ.ಬಿ ಪಾಸಿಟಿವ್‌ ರಕ್ತದ ಗುಂಪನ್ನ ಹೊಂದಿದ್ದರು,ಅವರ ಹೆಸರಿನಲ್ಲಿ ಈ ರೀತಿ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.ಇದೇ ವೇಳೆ ದರ್ಶನ್‌ ಅವರು ಧ್ರುವನಾರಾಯಣ್ ಅವರ  ನೆನಪಿಗಾಗಿ ವಿವಿಧ ಬಗೆಯ ಸಸಿಗಳನ್ನು ಕಾರ್ಯಕರ್ತರಿಗೆ ವಿತರಣೆ ಮಾಡಿದರು.

ಧ್ರುವನಾರಾಯಣ್ ಅಭಿಮಾನಿಗಳು ಹಾಗೂ ಲಯನ್ಸ್ ಜೀವಧಾರ‌ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದ ಸುಮಾರು 150 ಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನದ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್ ,ಶಂಕರ್, ಶ್ರೀಕಂಠ ನಾಯಕ,ಮುಖಂಡರಾದ ಮಂಜುನಾಥ್,ಗೋವಿಂದ್ ರಾಜ್ ನಾಗರಾಜಯ್ಯ, ಧ್ರುವ ನಾರಾಯಣ್ ಅವರ ಅಭಿಮಾನಿ ಬಳಗದ ಯುವಕರು,ನಗರಸಭಾ ಸದಸ್ಯರು ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.

lokesh

Recent Posts

ಸಿದ್ದಾಪುರ| ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಆನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ

ನವೀನ್‌ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು  ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…

14 mins ago

ಓದುಗರ ಪತ್ರ: ಗಾಂಜಾ ಮಾರಾಟ ತಡೆಗಟ್ಟಿ

ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…

1 hour ago

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

1 hour ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

1 hour ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

4 hours ago