ಮೈಸೂರು

ತಂದೆಯವರ ನೆನಪಿನಲ್ಲಿ ಪ್ರತಿ ವರ್ಷವೂ ರಕ್ತದಾನ : ದರ್ಶನ್‌ ಧ್ರುವ ನಾರಾಯಣ್

ನಂಜನಗೂಡು : ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಅವರ ಸವಿ ನೆನಪಿನಲ್ಲಿ ನಂಜನಗೂಡಿನಲ್ಲಿ ಬೃಹತ್‌ ರಕ್ತದಾನ ಶಿಬಿರವನ್ನ ಆಯೋಜನೆ ಮಾಡಲಾಗಿತ್ತು.
ನಗರದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಧ್ರುವನಾರಾಯಣ್ ಅಭಿಮಾನಿಗಳು ಆಯೋಜನೆ ಮಾಡಿದ್ದ ಬೃಹತ್‌ ರಕ್ತದಾದ ಶಿಬಿರಕ್ಕೆ ದರ್ಶನ್‌ ಧ್ರುವನಾರಾಯಣ್ ಅವರು ಧ್ರುವನಾರಾಯಣ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು ರಕ್ತದಾನ ಶ್ರೇಷ್ಠದಾನ ಇದರಿಂದ ಹಲವಾರು ಜೀವಗಳನ್ನು ಉಳಿಸಬಹುದು ತುರ್ತು ಸಂದರ್ಭದಲ್ಲಿ ಪ್ರಾಣಾಪಾಯದಲ್ಲಿರುವವರ ಜೀವ ಉಳೀಸಲು ರಕ್ತ ಬಹಳ ಮುಖ್ಯ, ನಮ್ಮ ತಂದೆಯವರ ನೆನಪಿನಲ್ಲಿ ಇಂತಹ ಉತ್ತಮ ಕಾರ್ಯಕ್ರಮ ಹಮ್ಮಿಕೊಂಡಿರುವ ನಂಜನಗೂಡಿನ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ.ಮುಂದೆಯೂ ಕೂಡ ನಮ್ಮ ತಂದೆಯವರ ನೆನಪಿನಲ್ಲಿ ಪ್ರತಿ ವರ್ಷ ಇಂತಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ನಮ್ಮ ತಂದೆಯವರು ಕೂಡ ಅಪರೂಪದ ಎ.ಬಿ ಪಾಸಿಟಿವ್‌ ರಕ್ತದ ಗುಂಪನ್ನ ಹೊಂದಿದ್ದರು,ಅವರ ಹೆಸರಿನಲ್ಲಿ ಈ ರೀತಿ ಸಮಾಜಮುಖಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದರು.ಇದೇ ವೇಳೆ ದರ್ಶನ್‌ ಅವರು ಧ್ರುವನಾರಾಯಣ್ ಅವರ  ನೆನಪಿಗಾಗಿ ವಿವಿಧ ಬಗೆಯ ಸಸಿಗಳನ್ನು ಕಾರ್ಯಕರ್ತರಿಗೆ ವಿತರಣೆ ಮಾಡಿದರು.

ಧ್ರುವನಾರಾಯಣ್ ಅಭಿಮಾನಿಗಳು ಹಾಗೂ ಲಯನ್ಸ್ ಜೀವಧಾರ‌ ಸಂಸ್ಥೆ ಜಂಟಿಯಾಗಿ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದ ಸುಮಾರು 150 ಕ್ಕೂ ಹೆಚ್ಚು ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನದ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್ ,ಶಂಕರ್, ಶ್ರೀಕಂಠ ನಾಯಕ,ಮುಖಂಡರಾದ ಮಂಜುನಾಥ್,ಗೋವಿಂದ್ ರಾಜ್ ನಾಗರಾಜಯ್ಯ, ಧ್ರುವ ನಾರಾಯಣ್ ಅವರ ಅಭಿಮಾನಿ ಬಳಗದ ಯುವಕರು,ನಗರಸಭಾ ಸದಸ್ಯರು ಸೇರಿದಂತೆ ನೂರಾರು ಮಂದಿ ಭಾಗಿಯಾಗಿದ್ದರು.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

8 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

9 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

10 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

14 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

14 hours ago