ಮೈಸೂರು

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ

ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ ಲಕ್ಷ ರೂ. ಮೌಲ್ಯದ ಬೋಟ್ ಖರೀದಿಸಿದೆ.

ಕುಕ್ಕರಹಳ್ಳಿ ಕೆರೆ ನೀರಿನ ದುವಾರ್ಸನೆ ತಪ್ಪಿಸುವಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಪಕ್ಷಿ ವೀಕ್ಷಕರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಯಲ್ಲಿ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮೈಸೂರು ವಿವಿ, ಇದೀಗ ಅಂದಾಜು ೩ ಲಕ್ಷ ರೂ. ವೆಚ್ಚದ ಬೋಟ್‌ಗಳನ್ನು ಗೋವಾದಿಂದ ಖರೀದಿಸಿ ತಂದಿದ್ದು, ನುರಿತ ತಜ್ಞರ ತಂಡದಿಂದ ಸ್ವಚ್ಛತೆ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ.

ಮೈಸೂರಿಗೆ ಬರುವ ಪ್ರವಾಸಿಗರು ಮತ್ತು ವಾಯು ವಿಹಾರಿಗಳಿಗೆ ಕುಕ್ಕರಹಳ್ಳಿ ಕೆರೆ ಜನಪ್ರಿಯ ಹಾಗೂ ನೆಚ್ಚಿನ ತಾಣ. ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಅವಽಯಲ್ಲಿ ಇದೇ ಕೆರೆ ದಡದಲ್ಲಿ ಕುಳಿತು ಕವಿತೆ ರಚಿಸುತ್ತಿದ್ದರು. ಈಗಲೂ ನಟ ಶಿವರಾಜ್‌ಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದರೆ ವಾಕಿಂಗ್‌ಗಾಗಿ ಕುಕ್ಕರಹಳ್ಳಿ ಕೆರೆಗೆ ಬರುತ್ತಾರೆ.

ಇದನ್ನೂ ಓದಿ:-ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಕಲುಷಿತ ನೀರಿನಿಂದ ಸಾವಿರಾರು ಜಲಚರಗಳು ಸಾವನ್ನ ಪ್ಪಿವೆ. ಇದು ಪರಿಸರ ಪ್ರೇಮಿಗಳು ಹಾಗೂ ಕುಕ್ಕರಹಳ್ಳಿ ಕೆರೆ ಒಡನಾಡಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಕುಕ್ಕರಹಳ್ಳಿ ಕೆರೆಯನ್ನು ಉಳಿಸುವಂತೆ ಹಿಂದಿನಿಂದಲೂ ಸಾಕಷ್ಟು ಹೋರಾಟಗಳು ನಡೆದಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ದೂರು, ಸಲಹೆ, ವರದಿಗಳನ್ನು ನೀಡಿದ್ದಾರೆ. ಈ ಎಲ್ಲ ಕಾರಣಕ್ಕಾಗಿ ವಿಶ್ವವಿ ದ್ಯಾನಿಲಯದ ಕುಲಸಚಿವರಾದ ಎಂ. ಕೆ. ಸವಿತಾ ಮುತುವರ್ಜಿ ವಹಿಸಿ, ಈ ಬಾರಿ ಕೆರೆಯನ್ನು ಶಾಶ್ವತವಾಗಿ ಶುದ್ಧಿಗೊಳಿಸಲು ನಿರ್ಧರಿಸಿದ್ದಾರೆ.

ಕುಕ್ಕರಹಳ್ಳಿ ಕೆರೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವಂತೆ ಅನೇಕ ಸಂಘ ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಔಟ್ ಬ್ಯಾಕ್ ಸಂಸ್ಥೆಯೊಂದಿಗೆ ಚರ್ಚಿಸಿ, ಬೋಟ್ ತರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಪಟುಗಳು, ಸ್ವಚ್ಛತಾ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕುಕ್ಕರಹಳ್ಳಿ ಕೆರೆಗೆ ಧಕ್ಕೆ ಆಗದಂತೆ ಮತ್ತಷ್ಟು ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುವುದು. -ಎಂ. ಕೆ. ಸವಿತಾ, ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯ

ಆಂದೋಲನ ಡೆಸ್ಕ್

Recent Posts

ಮುಂಬೈ ಮಹಾನಗರ ಪಾಲಿಕೆಯ ನೂತನ ಮೇಯರ್‌ ಆಗಿ ಬಿಜೆಪಿಯ ರಿತು ತಾವ್ಡೆ ಆಯ್ಕೆ

ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್‌ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25…

58 mins ago

ಸಿಎಂ ಆಗುವ ಆಸೆ ಎಲ್ಲರಿಗೂ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ…

1 hour ago

ಪಿರಿಯಾಪಟ್ಟಣ| ವಿದ್ಯುತ್‌ ಸ್ಪರ್ಶ: ಕಾಡಾನೆ ಸಾವು

ಪಿರಿಯಾಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಗೋಲ್ಡನ್‌ ಟೆಂಪಲ್‌ ಸಮೀಪದ ದೊಡ್ಡ ಹರವೆ ಕಾಲೋನಿ…

2 hours ago

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

2 hours ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

3 hours ago

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

4 hours ago