ಮೈಸೂರು

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ

ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ ಲಕ್ಷ ರೂ. ಮೌಲ್ಯದ ಬೋಟ್ ಖರೀದಿಸಿದೆ.

ಕುಕ್ಕರಹಳ್ಳಿ ಕೆರೆ ನೀರಿನ ದುವಾರ್ಸನೆ ತಪ್ಪಿಸುವಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಪಕ್ಷಿ ವೀಕ್ಷಕರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಯಲ್ಲಿ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮೈಸೂರು ವಿವಿ, ಇದೀಗ ಅಂದಾಜು ೩ ಲಕ್ಷ ರೂ. ವೆಚ್ಚದ ಬೋಟ್‌ಗಳನ್ನು ಗೋವಾದಿಂದ ಖರೀದಿಸಿ ತಂದಿದ್ದು, ನುರಿತ ತಜ್ಞರ ತಂಡದಿಂದ ಸ್ವಚ್ಛತೆ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ.

ಮೈಸೂರಿಗೆ ಬರುವ ಪ್ರವಾಸಿಗರು ಮತ್ತು ವಾಯು ವಿಹಾರಿಗಳಿಗೆ ಕುಕ್ಕರಹಳ್ಳಿ ಕೆರೆ ಜನಪ್ರಿಯ ಹಾಗೂ ನೆಚ್ಚಿನ ತಾಣ. ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಅವಽಯಲ್ಲಿ ಇದೇ ಕೆರೆ ದಡದಲ್ಲಿ ಕುಳಿತು ಕವಿತೆ ರಚಿಸುತ್ತಿದ್ದರು. ಈಗಲೂ ನಟ ಶಿವರಾಜ್‌ಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದರೆ ವಾಕಿಂಗ್‌ಗಾಗಿ ಕುಕ್ಕರಹಳ್ಳಿ ಕೆರೆಗೆ ಬರುತ್ತಾರೆ.

ಇದನ್ನೂ ಓದಿ:-ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಕಲುಷಿತ ನೀರಿನಿಂದ ಸಾವಿರಾರು ಜಲಚರಗಳು ಸಾವನ್ನ ಪ್ಪಿವೆ. ಇದು ಪರಿಸರ ಪ್ರೇಮಿಗಳು ಹಾಗೂ ಕುಕ್ಕರಹಳ್ಳಿ ಕೆರೆ ಒಡನಾಡಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಕುಕ್ಕರಹಳ್ಳಿ ಕೆರೆಯನ್ನು ಉಳಿಸುವಂತೆ ಹಿಂದಿನಿಂದಲೂ ಸಾಕಷ್ಟು ಹೋರಾಟಗಳು ನಡೆದಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ದೂರು, ಸಲಹೆ, ವರದಿಗಳನ್ನು ನೀಡಿದ್ದಾರೆ. ಈ ಎಲ್ಲ ಕಾರಣಕ್ಕಾಗಿ ವಿಶ್ವವಿ ದ್ಯಾನಿಲಯದ ಕುಲಸಚಿವರಾದ ಎಂ. ಕೆ. ಸವಿತಾ ಮುತುವರ್ಜಿ ವಹಿಸಿ, ಈ ಬಾರಿ ಕೆರೆಯನ್ನು ಶಾಶ್ವತವಾಗಿ ಶುದ್ಧಿಗೊಳಿಸಲು ನಿರ್ಧರಿಸಿದ್ದಾರೆ.

ಕುಕ್ಕರಹಳ್ಳಿ ಕೆರೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವಂತೆ ಅನೇಕ ಸಂಘ ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಔಟ್ ಬ್ಯಾಕ್ ಸಂಸ್ಥೆಯೊಂದಿಗೆ ಚರ್ಚಿಸಿ, ಬೋಟ್ ತರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಪಟುಗಳು, ಸ್ವಚ್ಛತಾ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕುಕ್ಕರಹಳ್ಳಿ ಕೆರೆಗೆ ಧಕ್ಕೆ ಆಗದಂತೆ ಮತ್ತಷ್ಟು ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುವುದು. -ಎಂ. ಕೆ. ಸವಿತಾ, ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

6 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

6 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

6 hours ago

ಓದುಗರ ಪತ್ರ: ಗೃಹಲಕ್ಷ್ಮಿ: ಅರ್ಹರಿಗೆ ಅನ್ಯಾಯವಾಗದಿರಲಿ

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…

6 hours ago

ಎಚ್೧ಎನ್೧: ಕೊಡಗು ಜಿಲ್ಲೆಯಲ್ಲಿ 4 ಪ್ರಕರಣ ದೃಢ

ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…

7 hours ago

ಮುಂಗಾರು ವೈಫಲ್ಯ: ಬಿತ್ತನೆ ಶೇ.15.95ಕ್ಕೆ ಕುಸಿತ

ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…

7 hours ago