ಮೈಸೂರು

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ

ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ ಲಕ್ಷ ರೂ. ಮೌಲ್ಯದ ಬೋಟ್ ಖರೀದಿಸಿದೆ.

ಕುಕ್ಕರಹಳ್ಳಿ ಕೆರೆ ನೀರಿನ ದುವಾರ್ಸನೆ ತಪ್ಪಿಸುವಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಪಕ್ಷಿ ವೀಕ್ಷಕರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಯಲ್ಲಿ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮೈಸೂರು ವಿವಿ, ಇದೀಗ ಅಂದಾಜು ೩ ಲಕ್ಷ ರೂ. ವೆಚ್ಚದ ಬೋಟ್‌ಗಳನ್ನು ಗೋವಾದಿಂದ ಖರೀದಿಸಿ ತಂದಿದ್ದು, ನುರಿತ ತಜ್ಞರ ತಂಡದಿಂದ ಸ್ವಚ್ಛತೆ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ.

ಮೈಸೂರಿಗೆ ಬರುವ ಪ್ರವಾಸಿಗರು ಮತ್ತು ವಾಯು ವಿಹಾರಿಗಳಿಗೆ ಕುಕ್ಕರಹಳ್ಳಿ ಕೆರೆ ಜನಪ್ರಿಯ ಹಾಗೂ ನೆಚ್ಚಿನ ತಾಣ. ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಅವಽಯಲ್ಲಿ ಇದೇ ಕೆರೆ ದಡದಲ್ಲಿ ಕುಳಿತು ಕವಿತೆ ರಚಿಸುತ್ತಿದ್ದರು. ಈಗಲೂ ನಟ ಶಿವರಾಜ್‌ಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದರೆ ವಾಕಿಂಗ್‌ಗಾಗಿ ಕುಕ್ಕರಹಳ್ಳಿ ಕೆರೆಗೆ ಬರುತ್ತಾರೆ.

ಇದನ್ನೂ ಓದಿ:-ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಕಲುಷಿತ ನೀರಿನಿಂದ ಸಾವಿರಾರು ಜಲಚರಗಳು ಸಾವನ್ನ ಪ್ಪಿವೆ. ಇದು ಪರಿಸರ ಪ್ರೇಮಿಗಳು ಹಾಗೂ ಕುಕ್ಕರಹಳ್ಳಿ ಕೆರೆ ಒಡನಾಡಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಕುಕ್ಕರಹಳ್ಳಿ ಕೆರೆಯನ್ನು ಉಳಿಸುವಂತೆ ಹಿಂದಿನಿಂದಲೂ ಸಾಕಷ್ಟು ಹೋರಾಟಗಳು ನಡೆದಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ದೂರು, ಸಲಹೆ, ವರದಿಗಳನ್ನು ನೀಡಿದ್ದಾರೆ. ಈ ಎಲ್ಲ ಕಾರಣಕ್ಕಾಗಿ ವಿಶ್ವವಿ ದ್ಯಾನಿಲಯದ ಕುಲಸಚಿವರಾದ ಎಂ. ಕೆ. ಸವಿತಾ ಮುತುವರ್ಜಿ ವಹಿಸಿ, ಈ ಬಾರಿ ಕೆರೆಯನ್ನು ಶಾಶ್ವತವಾಗಿ ಶುದ್ಧಿಗೊಳಿಸಲು ನಿರ್ಧರಿಸಿದ್ದಾರೆ.

ಕುಕ್ಕರಹಳ್ಳಿ ಕೆರೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವಂತೆ ಅನೇಕ ಸಂಘ ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಔಟ್ ಬ್ಯಾಕ್ ಸಂಸ್ಥೆಯೊಂದಿಗೆ ಚರ್ಚಿಸಿ, ಬೋಟ್ ತರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಪಟುಗಳು, ಸ್ವಚ್ಛತಾ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕುಕ್ಕರಹಳ್ಳಿ ಕೆರೆಗೆ ಧಕ್ಕೆ ಆಗದಂತೆ ಮತ್ತಷ್ಟು ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುವುದು. -ಎಂ. ಕೆ. ಸವಿತಾ, ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯ

ಆಂದೋಲನ ಡೆಸ್ಕ್

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

1 hour ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago