ಮೈಸೂರು

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ

ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ ಕೆರೆಗೆ ಒಳಚರಂಡಿ ನೀರು ಸೇರಿ ದಂತೆ ಹಲವು ಕಾರಣಕ್ಕಾಗಿ ಕಲುಷಿತಗೊಂಡು ದುರ್ವಾಸನೆ ಬೀರುತ್ತಿರುವುದರಿಂದ ಕೆರೆಯನ್ನು ಸ್ವಚ್ಛಗೊಳಿಸಲು ಮೈಸೂರು ವಿಶ್ವವಿದ್ಯಾನಿಲಯ ೩ ಲಕ್ಷ ರೂ. ಮೌಲ್ಯದ ಬೋಟ್ ಖರೀದಿಸಿದೆ.

ಕುಕ್ಕರಹಳ್ಳಿ ಕೆರೆ ನೀರಿನ ದುವಾರ್ಸನೆ ತಪ್ಪಿಸುವಂತೆ ನಗರದ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಪಕ್ಷಿ ವೀಕ್ಷಕರು ಮೈಸೂರು ವಿಶ್ವವಿದ್ಯಾನಿಲಯಕ್ಕೆ ಹಲವು ಬಾರಿ ಮನವಿಗಳನ್ನು ಸಲ್ಲಿಸಿದ್ದವು. ಈ ಹಿನ್ನೆಲೆ ಯಲ್ಲಿ ಕೆರೆ ಅಭಿವೃದ್ಧಿಗೆ ಆದ್ಯತೆ ನೀಡಿರುವ ಮೈಸೂರು ವಿವಿ, ಇದೀಗ ಅಂದಾಜು ೩ ಲಕ್ಷ ರೂ. ವೆಚ್ಚದ ಬೋಟ್‌ಗಳನ್ನು ಗೋವಾದಿಂದ ಖರೀದಿಸಿ ತಂದಿದ್ದು, ನುರಿತ ತಜ್ಞರ ತಂಡದಿಂದ ಸ್ವಚ್ಛತೆ ಆರಂಭಿಸಲು ತಯಾರಿ ಮಾಡಿಕೊಳ್ಳುತ್ತಿದೆ.

ಮೈಸೂರಿಗೆ ಬರುವ ಪ್ರವಾಸಿಗರು ಮತ್ತು ವಾಯು ವಿಹಾರಿಗಳಿಗೆ ಕುಕ್ಕರಹಳ್ಳಿ ಕೆರೆ ಜನಪ್ರಿಯ ಹಾಗೂ ನೆಚ್ಚಿನ ತಾಣ. ರಾಷ್ಟ್ರಕವಿ ಕುವೆಂಪು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿಯಾಗಿದ್ದ ಅವಽಯಲ್ಲಿ ಇದೇ ಕೆರೆ ದಡದಲ್ಲಿ ಕುಳಿತು ಕವಿತೆ ರಚಿಸುತ್ತಿದ್ದರು. ಈಗಲೂ ನಟ ಶಿವರಾಜ್‌ಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದರೆ ವಾಕಿಂಗ್‌ಗಾಗಿ ಕುಕ್ಕರಹಳ್ಳಿ ಕೆರೆಗೆ ಬರುತ್ತಾರೆ.

ಇದನ್ನೂ ಓದಿ:-ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಕಲುಷಿತ ನೀರಿನಿಂದ ಸಾವಿರಾರು ಜಲಚರಗಳು ಸಾವನ್ನ ಪ್ಪಿವೆ. ಇದು ಪರಿಸರ ಪ್ರೇಮಿಗಳು ಹಾಗೂ ಕುಕ್ಕರಹಳ್ಳಿ ಕೆರೆ ಒಡನಾಡಿಗಳ ಆಕ್ರೋಶಕ್ಕೂ ಕಾರಣವಾಗಿತ್ತು.

ಕುಕ್ಕರಹಳ್ಳಿ ಕೆರೆಯನ್ನು ಉಳಿಸುವಂತೆ ಹಿಂದಿನಿಂದಲೂ ಸಾಕಷ್ಟು ಹೋರಾಟಗಳು ನಡೆದಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಾಕಷ್ಟು ದೂರು, ಸಲಹೆ, ವರದಿಗಳನ್ನು ನೀಡಿದ್ದಾರೆ. ಈ ಎಲ್ಲ ಕಾರಣಕ್ಕಾಗಿ ವಿಶ್ವವಿ ದ್ಯಾನಿಲಯದ ಕುಲಸಚಿವರಾದ ಎಂ. ಕೆ. ಸವಿತಾ ಮುತುವರ್ಜಿ ವಹಿಸಿ, ಈ ಬಾರಿ ಕೆರೆಯನ್ನು ಶಾಶ್ವತವಾಗಿ ಶುದ್ಧಿಗೊಳಿಸಲು ನಿರ್ಧರಿಸಿದ್ದಾರೆ.

ಕುಕ್ಕರಹಳ್ಳಿ ಕೆರೆಯನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡುವಂತೆ ಅನೇಕ ಸಂಘ ಸಂಸ್ಥೆಗಳು ಮನವಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಔಟ್ ಬ್ಯಾಕ್ ಸಂಸ್ಥೆಯೊಂದಿಗೆ ಚರ್ಚಿಸಿ, ಬೋಟ್ ತರಿಸಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ನುರಿತ ಈಜುಪಟುಗಳು, ಸ್ವಚ್ಛತಾ ತಂಡಕ್ಕೆ ತರಬೇತಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಕುಕ್ಕರಹಳ್ಳಿ ಕೆರೆಗೆ ಧಕ್ಕೆ ಆಗದಂತೆ ಮತ್ತಷ್ಟು ಅಭಿವೃದ್ದಿ ಕಾರ್ಯ ಕೈಗೊಳ್ಳಲಾಗುವುದು. -ಎಂ. ಕೆ. ಸವಿತಾ, ಕುಲಸಚಿವರು, ಮೈಸೂರು ವಿಶ್ವವಿದ್ಯಾನಿಲಯ

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

1 hour ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

2 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

3 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

3 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

4 hours ago