ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು.
ಬಳಿಕ ಪ್ರತಿಕ್ರಿಯೆ ನೀಡಿದ ಅವರು ದೋಣಿ ವಿಹಾರಕ್ಕಾಗಿ ನಗರ ಪ್ರದೇಶಗಳಿಗೆ ಹೋಗಬೇಕು. ಹೀಗಿರುವಾಗ ಇಲ್ಲಿ ಅವಕಾಶ ಕಲ್ಪಿಸಿರುವುದು ಗ್ರಾಮೀಣ ಭಾಗದ ಜನರಲ್ಲಿ ಸಂತೋಷ ತಂದಿದೆ ಎಂದರು.
ಪ್ರತಿ ವರ್ಷವೂ ಸುತ್ತೂರು ಜಾತ್ರೆಯ ಪ್ರಯುಕ್ತ ಕಪಿಲಾ ನದಿಯಲ್ಲಿ ದೋಣಿ ವಿಹಾರ ಆಯೋಜಿಸಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಭಕ್ತಾದಿಗಳು ಜಾಸ್ತಿಯಾಗುತ್ತಿದ್ದಾರೆ. ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.
ಎಲ್ಲರ ಸಹಕಾರದಿಂದ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದರು.
ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳ ಕುಟುಂಬದವರಾದ ಡಾ.ಮಹೇಶನ್, ಡಾ.ಎಸ್.ಯು.ಹರಪ್ರಸಾದ್, ಪ್ರೊ. ಎಂ.ಎಸ್.ಅಭಿನಂದನ್ ಹಾಗೂ ಕುಟುಂಬದವರಿದ್ದರು.
ಇನ್ನು ಶಾಲಾಮಕ್ಕಳು, ಭಕ್ತಾದಿಗಳು ದೋಣಿ ವಿಹಾರ ಮಾಡಿ ಆನಂದಿಸಿದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…