ಮೈಸೂರು

ಸುತ್ತೂರು ಜಾತ್ರೆ ಪ್ರಯುಕ್ತ ಕಪಿಲಾ‌ ನದಿಯಲ್ಲಿ ದೋಣಿ ವಿಹಾರ

ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು.

ಬಳಿಕ‌ ಪ್ರತಿಕ್ರಿಯೆ ನೀಡಿದ ಅವರು ದೋಣಿ ವಿಹಾರಕ್ಕಾಗಿ ನಗರ ಪ್ರದೇಶಗಳಿಗೆ ಹೋಗಬೇಕು. ಹೀಗಿರುವಾಗ ಇಲ್ಲಿ ಅವಕಾಶ ಕಲ್ಪಿಸಿರುವುದು ಗ್ರಾಮೀಣ ಭಾಗದ ಜನರಲ್ಲಿ ಸಂತೋಷ ತಂದಿದೆ ಎಂದರು.

ಪ್ರತಿ ವರ್ಷವೂ ಸುತ್ತೂರು ಜಾತ್ರೆಯ ಪ್ರಯುಕ್ತ ಕಪಿಲಾ ನದಿಯಲ್ಲಿ ದೋಣಿ ವಿಹಾರ ಆಯೋಜಿಸಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಭಕ್ತಾದಿಗಳು ಜಾಸ್ತಿಯಾಗುತ್ತಿದ್ದಾರೆ. ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.

ಎಲ್ಲರ ಸಹಕಾರದಿಂದ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳ ಕುಟುಂಬದವರಾದ ಡಾ.ಮಹೇಶನ್, ಡಾ.ಎಸ್.ಯು.ಹರಪ್ರಸಾದ್, ಪ್ರೊ. ಎಂ.ಎಸ್.ಅಭಿನಂದನ್‌ ಹಾಗೂ ಕುಟುಂಬದವರಿದ್ದರು.

ಇನ್ನು ಶಾಲಾ‌ಮಕ್ಕಳು, ಭಕ್ತಾದಿಗಳು ದೋಣಿ ವಿಹಾರ ಮಾಡಿ‌ ಆನಂದಿಸಿದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

9 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

36 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago