ಮೈಸೂರು

ಸುತ್ತೂರು ಜಾತ್ರೆ ಪ್ರಯುಕ್ತ ಕಪಿಲಾ‌ ನದಿಯಲ್ಲಿ ದೋಣಿ ವಿಹಾರ

ಸುತ್ತೂರು : ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಕಪಿಲಾ ನದಿ ದಂಡೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೋಣಿ ವಿಹಾರ ಆಯೋಜಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಸುತ್ತೂರು ಶ್ರೀ ಕ್ಷೇತ್ರದ ಆಡಳಿತಾಧಿಕಾರಿ ಎಸ್.ಪಿ.ಉದಯ್ ಶಂಕರ್ ಅವರು ಕುಟುಂಬ ಸಮೇತ ಆಗಮಿಸಿ ದೋಣಿ ವಿಹಾರ ಮಾಡಿದರು.

ಬಳಿಕ‌ ಪ್ರತಿಕ್ರಿಯೆ ನೀಡಿದ ಅವರು ದೋಣಿ ವಿಹಾರಕ್ಕಾಗಿ ನಗರ ಪ್ರದೇಶಗಳಿಗೆ ಹೋಗಬೇಕು. ಹೀಗಿರುವಾಗ ಇಲ್ಲಿ ಅವಕಾಶ ಕಲ್ಪಿಸಿರುವುದು ಗ್ರಾಮೀಣ ಭಾಗದ ಜನರಲ್ಲಿ ಸಂತೋಷ ತಂದಿದೆ ಎಂದರು.

ಪ್ರತಿ ವರ್ಷವೂ ಸುತ್ತೂರು ಜಾತ್ರೆಯ ಪ್ರಯುಕ್ತ ಕಪಿಲಾ ನದಿಯಲ್ಲಿ ದೋಣಿ ವಿಹಾರ ಆಯೋಜಿಸಲಾಗುತ್ತದೆ. ವರ್ಷದಿಂದ ವರ್ಷಕ್ಕೆ ಭಕ್ತಾದಿಗಳು ಜಾಸ್ತಿಯಾಗುತ್ತಿದ್ದಾರೆ. ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ಭಕ್ತಾದಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂದರು.

ಎಲ್ಲರ ಸಹಕಾರದಿಂದ ಯಾವುದೇ ಸಮಸ್ಯೆಯಾಗದಂತೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಅಂತ ತಿಳಿಸಿದರು.

ಈ ಸಂದರ್ಭದಲ್ಲಿ ಆಡಳಿತಾಧಿಕಾರಿಗಳ ಕುಟುಂಬದವರಾದ ಡಾ.ಮಹೇಶನ್, ಡಾ.ಎಸ್.ಯು.ಹರಪ್ರಸಾದ್, ಪ್ರೊ. ಎಂ.ಎಸ್.ಅಭಿನಂದನ್‌ ಹಾಗೂ ಕುಟುಂಬದವರಿದ್ದರು.

ಇನ್ನು ಶಾಲಾ‌ಮಕ್ಕಳು, ಭಕ್ತಾದಿಗಳು ದೋಣಿ ವಿಹಾರ ಮಾಡಿ‌ ಆನಂದಿಸಿದರು.

andolanait

Recent Posts

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

2 mins ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 mins ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

7 mins ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

11 mins ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

16 mins ago