ಮೈಸೂರು

ಮೈಸೂರಿನ ಐದು ಶಾಲೆಗಳಿಗೆ ಭೇಟಿ ಬಾಲಿವುಡ್‌ ನಟ ಭೇಟಿ

ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು.

ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ ಜಮೀನ್ ಪರ್ ಚಿತ್ರದ ವಿಶೇಷ ಪ್ರದರ್ಶನ ಕಾರ್ಯಕ್ರಮದಲ್ಲಿ ೨೦೦ಕ್ಕಿಂತ ಹೆಚ್ಚು ವಿಶೇಷ ಮಕ್ಕಳ ಜೊತೆಗೆ ೪೦೦ಕ್ಕೂ ಹೆಚ್ಚು ಪೋಷಕರು, ಶಿಕ್ಷಕರು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.

ಈ ಕಾರ್ಯಕ್ರಮದ ವಿಡಿಯೋವನ್ನು ಗುರುಪಾಲ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಮಂಗಳವಾರ ಗುರುಪಾಲ್ ಸಿಂಗ್ ಅವರು ಮೈಸೂರಿಗೆ ಆಗಮಿಸಿ ಅಣುವ್ರತ ಸಮಿತಿ ತಂಡದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಜೆಎಸ್‌ಎಸ್ ಸಹಾನಾ ಶಾಲೆ, ನಿರೀಕ್ಷೆ ವಿಶೇಷ ಶಾಲೆ, ಗ್ರೇಸ್ ವಿಶೇಷ ಶಾಲೆ, ವಿಸ್ಡಮ್ ವಿಶೇಷ ಶಾಲೆ ಹಾಗೂ ಎಂ.ಜೆ. ಸೂಫಿ ಶಾಲೆಗಳಿಗೆ ಗುರುಪಾಲ್ ಸಿಂಗ್ ಭೇಟಿ ನೀಡಿದ್ದು, ಈ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಎಲ್ಲಾ ಶಾಲೆಗಳಲ್ಲಿಯೂ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

5 hours ago

ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು

ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪದ ಸೀರಗೊಡು ಗ್ರಾಮದ ಸೂಳಿಮೇಡು ಅರಣ್ಯ ಪ್ರದೇಶದಲ್ಲಿ ಸುಮಾರು ಆರು ತಿಂಗಳ ಚಿರತೆ ಮರಿಯನ್ನು ಗ್ರಾಮಸ್ಥರು…

6 hours ago

ಹುಣಸೂರಿನಲ್ಲಿ ಹಾಡಹಗಲೇ ಚಿನ್ನಭರಣ ದರೋಡೆ : ಐಜಿಪಿ ಬೋರಲಿಂಗಯ್ಯ ಹೇಳಿದ್ದೇನು?

ಹುಣಸೂರು : ಹುಣಸೂರು ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ ನಡೆದಿದೆ. ಬಸ್ ನಿಲ್ದಾಣದ ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌…

7 hours ago

ವರುಣಾ ನಾಲೆಯಲ್ಲಿ ಮಹಿಳೆ ಶವ ಪತ್ತೆ : ಚಿನ್ನಕ್ಕಾಗಿ ಕೊಲೆ ಶಂಕೆ?

ಶ್ರೀರಂಗಪಟ್ಟಣ : ತಾಲ್ಲೂಕಿನ ಪಾಲಹಳ್ಳಿಯ ವರುಣಾ ನಾಲೆಯಲ್ಲಿ ಬಟ್ಟೆ ತೊಳೆಯಲು ಬಂದ ಮಹಿಳೆಯೋರ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಮತಾ…

7 hours ago

ವಾಯುನೆಲೆ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪಾಕಿಸ್ತಾನ

ಕರಾಚಿ : ಕಳೆದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ರಾವಲ್ಪಿಂಡಿಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ…

7 hours ago

ಸಿನಿ ಪಯಣಕ್ಕೆ ದಳಪತಿ ವಿಜಯ್‌ ವಿದಾಯ : ಭಾವುಕರಾಗಿ ಅಭಿಮಾನಿಗಳಿಗೆ ಹೇಳಿದ್ದೇನು?

ಚೆನ್ನೈ : ದಳಪತಿ ವಿಜಯ್‌ ನಟನೆಯ ‘ಜನ ನಾಯಗನ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಡಿಸೆಂಬರ್ 27 ಮಲೇಷ್ಯಾನಲ್ಲಿ ಅದ್ಧೂರಿಯಾಗಿ…

7 hours ago