Bollywood actor visits five schools in Mysore
ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು.
ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ ಜಮೀನ್ ಪರ್ ಚಿತ್ರದ ವಿಶೇಷ ಪ್ರದರ್ಶನ ಕಾರ್ಯಕ್ರಮದಲ್ಲಿ ೨೦೦ಕ್ಕಿಂತ ಹೆಚ್ಚು ವಿಶೇಷ ಮಕ್ಕಳ ಜೊತೆಗೆ ೪೦೦ಕ್ಕೂ ಹೆಚ್ಚು ಪೋಷಕರು, ಶಿಕ್ಷಕರು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.
ಈ ಕಾರ್ಯಕ್ರಮದ ವಿಡಿಯೋವನ್ನು ಗುರುಪಾಲ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಮಂಗಳವಾರ ಗುರುಪಾಲ್ ಸಿಂಗ್ ಅವರು ಮೈಸೂರಿಗೆ ಆಗಮಿಸಿ ಅಣುವ್ರತ ಸಮಿತಿ ತಂಡದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಜೆಎಸ್ಎಸ್ ಸಹಾನಾ ಶಾಲೆ, ನಿರೀಕ್ಷೆ ವಿಶೇಷ ಶಾಲೆ, ಗ್ರೇಸ್ ವಿಶೇಷ ಶಾಲೆ, ವಿಸ್ಡಮ್ ವಿಶೇಷ ಶಾಲೆ ಹಾಗೂ ಎಂ.ಜೆ. ಸೂಫಿ ಶಾಲೆಗಳಿಗೆ ಗುರುಪಾಲ್ ಸಿಂಗ್ ಭೇಟಿ ನೀಡಿದ್ದು, ಈ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಎಲ್ಲಾ ಶಾಲೆಗಳಲ್ಲಿಯೂ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…