Bollywood actor visits five schools in Mysore
ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು.
ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ ಜಮೀನ್ ಪರ್ ಚಿತ್ರದ ವಿಶೇಷ ಪ್ರದರ್ಶನ ಕಾರ್ಯಕ್ರಮದಲ್ಲಿ ೨೦೦ಕ್ಕಿಂತ ಹೆಚ್ಚು ವಿಶೇಷ ಮಕ್ಕಳ ಜೊತೆಗೆ ೪೦೦ಕ್ಕೂ ಹೆಚ್ಚು ಪೋಷಕರು, ಶಿಕ್ಷಕರು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.
ಈ ಕಾರ್ಯಕ್ರಮದ ವಿಡಿಯೋವನ್ನು ಗುರುಪಾಲ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಮಂಗಳವಾರ ಗುರುಪಾಲ್ ಸಿಂಗ್ ಅವರು ಮೈಸೂರಿಗೆ ಆಗಮಿಸಿ ಅಣುವ್ರತ ಸಮಿತಿ ತಂಡದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಜೆಎಸ್ಎಸ್ ಸಹಾನಾ ಶಾಲೆ, ನಿರೀಕ್ಷೆ ವಿಶೇಷ ಶಾಲೆ, ಗ್ರೇಸ್ ವಿಶೇಷ ಶಾಲೆ, ವಿಸ್ಡಮ್ ವಿಶೇಷ ಶಾಲೆ ಹಾಗೂ ಎಂ.ಜೆ. ಸೂಫಿ ಶಾಲೆಗಳಿಗೆ ಗುರುಪಾಲ್ ಸಿಂಗ್ ಭೇಟಿ ನೀಡಿದ್ದು, ಈ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಎಲ್ಲಾ ಶಾಲೆಗಳಲ್ಲಿಯೂ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…