Bollywood actor visits five schools in Mysore
ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು.
ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ ಜಮೀನ್ ಪರ್ ಚಿತ್ರದ ವಿಶೇಷ ಪ್ರದರ್ಶನ ಕಾರ್ಯಕ್ರಮದಲ್ಲಿ ೨೦೦ಕ್ಕಿಂತ ಹೆಚ್ಚು ವಿಶೇಷ ಮಕ್ಕಳ ಜೊತೆಗೆ ೪೦೦ಕ್ಕೂ ಹೆಚ್ಚು ಪೋಷಕರು, ಶಿಕ್ಷಕರು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.
ಈ ಕಾರ್ಯಕ್ರಮದ ವಿಡಿಯೋವನ್ನು ಗುರುಪಾಲ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಮಂಗಳವಾರ ಗುರುಪಾಲ್ ಸಿಂಗ್ ಅವರು ಮೈಸೂರಿಗೆ ಆಗಮಿಸಿ ಅಣುವ್ರತ ಸಮಿತಿ ತಂಡದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಜೆಎಸ್ಎಸ್ ಸಹಾನಾ ಶಾಲೆ, ನಿರೀಕ್ಷೆ ವಿಶೇಷ ಶಾಲೆ, ಗ್ರೇಸ್ ವಿಶೇಷ ಶಾಲೆ, ವಿಸ್ಡಮ್ ವಿಶೇಷ ಶಾಲೆ ಹಾಗೂ ಎಂ.ಜೆ. ಸೂಫಿ ಶಾಲೆಗಳಿಗೆ ಗುರುಪಾಲ್ ಸಿಂಗ್ ಭೇಟಿ ನೀಡಿದ್ದು, ಈ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಎಲ್ಲಾ ಶಾಲೆಗಳಲ್ಲಿಯೂ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…