ಮೈಸೂರು

ಮೈಸೂರಿನ ಐದು ಶಾಲೆಗಳಿಗೆ ಭೇಟಿ ಬಾಲಿವುಡ್‌ ನಟ ಭೇಟಿ

ಮೈಸೂರು : ಅಣುವ್ರತ ಸಮಿತಿ ಮೈಸೂರಿನ ತಂಡದೊಂದಿಗೆ ಮೈಸೂರಿನ ಐದು ಶಾಲೆಗಳಿಗೆ ಭೇಟಿ ನೀಡಿದ ಬಾಲಿವುಡ್ ನಟ ಗುರುಪಾಲ್ ಸಿಂಗ್ ಅವರು ವಿಶೇಷ ಮಕ್ಕಳೊಂದಿಗೆ ತಮ್ಮ ಸಂತಸದ ಕ್ಷಣವನ್ನು ಹಂಚಿಕೊಂಡರು.

ಅಣುವ್ರತ ಸಮಿತಿ ಮೈಸೂರು ವತಿಯಿಂದ ಸ್ಪರ್ಶನೀಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಿತಾರೆ ಜಮೀನ್ ಪರ್ ಚಿತ್ರದ ವಿಶೇಷ ಪ್ರದರ್ಶನ ಕಾರ್ಯಕ್ರಮದಲ್ಲಿ ೨೦೦ಕ್ಕಿಂತ ಹೆಚ್ಚು ವಿಶೇಷ ಮಕ್ಕಳ ಜೊತೆಗೆ ೪೦೦ಕ್ಕೂ ಹೆಚ್ಚು ಪೋಷಕರು, ಶಿಕ್ಷಕರು ಮತ್ತು ಸ್ವಯಂಸೇವಕರು ಭಾಗವಹಿಸಿದ್ದರು.

ಈ ಕಾರ್ಯಕ್ರಮದ ವಿಡಿಯೋವನ್ನು ಗುರುಪಾಲ್ ಸಿಂಗ್ ಅವರಿಗೆ ಕಳುಹಿಸಲಾಗಿತ್ತು. ಮಂಗಳವಾರ ಗುರುಪಾಲ್ ಸಿಂಗ್ ಅವರು ಮೈಸೂರಿಗೆ ಆಗಮಿಸಿ ಅಣುವ್ರತ ಸಮಿತಿ ತಂಡದೊಂದಿಗೆ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಸಮಯ ಕಳೆದರು. ಜೆಎಸ್‌ಎಸ್ ಸಹಾನಾ ಶಾಲೆ, ನಿರೀಕ್ಷೆ ವಿಶೇಷ ಶಾಲೆ, ಗ್ರೇಸ್ ವಿಶೇಷ ಶಾಲೆ, ವಿಸ್ಡಮ್ ವಿಶೇಷ ಶಾಲೆ ಹಾಗೂ ಎಂ.ಜೆ. ಸೂಫಿ ಶಾಲೆಗಳಿಗೆ ಗುರುಪಾಲ್ ಸಿಂಗ್ ಭೇಟಿ ನೀಡಿದ್ದು, ಈ ಶಾಲೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಎಲ್ಲಾ ಶಾಲೆಗಳಲ್ಲಿಯೂ ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಾಯಿತು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

3 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

3 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

3 hours ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

3 hours ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

3 hours ago