ಮೈಸೂರು: ಚೆಕ್ಬೌನ್ಸ್ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣಗೆ ಮೂರನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ ನ್ಯಾಯಾಲಯವು 2.25ಲಕ್ಷ ದಂಡ ವಿಧಿಸಿದೆ.
ದಂಡ ವಿಧಿಸಿ ಗುರುವಾರ ಆದೇಶ ನೀಡಿರುವ ನ್ಯಾಯಲಯ, ಪಾವತಿಸುವಲ್ಲಿ ವಿಫಲವಾದರೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ತನ್ನ ತೀರ್ಪು ಪ್ರಕಟಿಸಿದೆ.
ಕೃಷ್ಣ 2015ರಲ್ಲಿ ಲಲಿತಾದ್ರಿಪುರದ ಕುಮಾರ್ ಅವರಿಂದ ಸಾಲ ಪಡೆದಿದ್ದರು. ಇದಕ್ಕೆ ಪ್ರತಿಯಾಗಿ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್ನ ಚೆಕ್ ನೀಡಿದ್ದರು. ಕುಮಾರ್ ಆ ಚೆಕ್ನ್ನು ಬ್ಯಾಂಕ್ ಖಾತೆಗೆ ಹಾಕಿದಾಗ ಬೌನ್ಸ್ ಆಗಿತ್ತು. ನಂತರ ಅವರು ಕೃಷ್ಣ ವಿರುದ್ಧ ದೂರು ದಾಖಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪ ಸಾಬೀತಾಗಿದ್ದರಿಂದ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…