ಮೈಸೂರು

ಟ್ರಾಕ್ಟರ್‌ನ ರೂಟರ್‌ಗೆ ಸಿಲುಕಿ ಬಾಲಕ ಸಾವು; ನಂಜನಗೂಡಿನಲ್ಲಿ ದುರಂತ

ನಂಜನಗೂಡು : ಟ್ರಾಕ್ಟರ್‌ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತವರೂರು ದೇವರಸನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಟ್ರಾಕ್ಟರ್‌ನಲ್ಲಿ ಕುಳ್ಳಿರಿಸಿಕೊಂಡು ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭದಲ್ಲಿ ಬಾಲಕ ಭವಿಷ್ ಅಯತಪ್ಪಿ ಟ್ರ್ಯಾಕ್ಟರ ಕೆಳಗೆ ಬಿದ್ದು ರೂಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago