ಮೈಸೂರು

ಟ್ರಾಕ್ಟರ್‌ನ ರೂಟರ್‌ಗೆ ಸಿಲುಕಿ ಬಾಲಕ ಸಾವು; ನಂಜನಗೂಡಿನಲ್ಲಿ ದುರಂತ

ನಂಜನಗೂಡು : ಟ್ರಾಕ್ಟರ್‌ನ ರೂಟರಿಗೆ ಸಿಲುಕಿ ಬಾಲಕ ಮೃತಪಟ್ಟ ದುರಂತ ಘಟನೆ ನಂಜನಗೂಡು ತಾಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಜಾ ಹಿನ್ನೆಲೆಯಲ್ಲಿ ತನ್ನ ಅಜ್ಜಿ ಮನೆಗೆ ಬಂದಿದ್ದ ಭವಿಷ್ (8) ಮೃತ ದುರ್ದೈವಿ. ತಾಯಿ ಮಮತಾ ದೇವರಸಹಳ್ಳಿಯಿಂದ ಚಾಮರಾಜನಗರಕ್ಕೆ ಮದುವೆಯಾಗಿದ್ದು ಶಾಲಾ ರಜೆ ಕಳೆಯಲು ತನ್ನ ಎರಡು ಮಕ್ಕಳೊಂದಿಗೆ ತವರೂರು ದೇವರಸನಹಳ್ಳಿಗೆ ಬಂದಿದ್ದಾಗ ಈ ಘಟನೆ ನಡೆದಿದೆ.

ಬಾಲಕನ ಸೋದರ ಮಾವ ನನ್ನ ತಂಗಿಯ ಎರಡು ಮಕ್ಕಳನ್ನು ಜಮೀನಿಗೆ ಕರೆದುಕೊಂಡು ಹೋಗಿ ಟ್ರಾಕ್ಟರ್‌ನಲ್ಲಿ ಕುಳ್ಳಿರಿಸಿಕೊಂಡು ಜಮೀನಿನಲ್ಲಿ ಉಳುಮೆ ಮಾಡುವ ಸಂದರ್ಭದಲ್ಲಿ ಬಾಲಕ ಭವಿಷ್ ಅಯತಪ್ಪಿ ಟ್ರ್ಯಾಕ್ಟರ ಕೆಳಗೆ ಬಿದ್ದು ರೂಟರಿಗೆ ಸಿಲುಕಿದಾಗ ದೇಹ ತುಂಡು ತುಂಡಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಶ್ರೀಧರ್ ಆರ್ ಭಟ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವನಾದ ನಾನು ನಂಜನಗೂಡು ನಗರದಲ್ಲಿ ವಾಸವಾಗಿದ್ದು 1982ರ ಮಾರ್ಚ್ ತಿಂಗಳಿಂದ‌, 42 ವರ್ಷಗಳಿಂದ ಆಂದೋಲನ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಮೊಬೈಲ್‌ ಸಂಖ್ಯೆ: 9448425325

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago