ನಂಜನಗೂಡು : ಕೆಎಸ್ಆರ್ಟಿಸಿ ಬಸ್ವೊಂದರ ಬ್ರೇಕ್ ಪೈಲ್ಯೂರ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ತಾಲೂಕಿನ ಕಲ್ಮಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ನಂಜನಗೂಡು-ಟಿ.ನರಸೀಪುರ ಮಾರ್ಗವಾಗಿ ತೆರಳುತ್ತಿದ್ದ ಸಾರಿಗೆ ಬಸ್ ಗ್ರಾಮದ ಗೇಟ್ ಬಳಿಯ ತಿರುವಿನಲ್ಲಿ ಬ್ರೇಕ್ ಫೈಲ್ಯೂರ್ ಆಗಿದೆ. ಈ ವೇಳೆ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





