ಮೈಸೂರು

ಬ್ರಾಂಡ್‌ ಬೆಂಗಳೂರು ಇಮೇಜ್‌ ಕೆಡಿಸಲು ಸಾಧ್ಯವಿಲ್ಲ : ಗೃಹ ಸಚಿವ ಪರಂ

ಮೈಸೂರು : ಐಟಿ ದಿಗ್ಗಜರ ಟ್ವೀಟ್‌ಗಳಿಗೆ ಕಿಡಿಕಾರಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಒಂದೆರಡು ರಸ್ತೆಗಳು ಗುಂಡಿ ಬಿದ್ದಿದ್ದನ್ನು ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನಾನು ಯಾರು ಎಂದು ಬಾಯಿ ಬಿಟ್ಟು ಹೇಳುತ್ತಿಲ್ಲ ಅಷ್ಟೇ ಎಂದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆಗಳು ಹಾಳಾಗಿರುವುದು ಸತ್ಯ. ರಸ್ತೆಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ಟ್ವೀಟ್‌ಗಳನ್ನು ಮಾಡಬೇಡಿ. ಯಾರು ಏನೇ ಮಾಡಿದರೂ ಬ್ರಾಂಡ್ ಬೆಂಗಳೂರಿನ ಇಮೇಜ್ ಕೆಡಿಸಲು ಸಾಧ್ಯವಿಲ್ಲ. ಗೂಗಲ್ ಕಂಪೆನಿ ಆಂಧ್ರಪ್ರದೇಶಕ್ಕೆ ಹೋಗಲು ಅವರದ್ದೇ ಆದ ಕೆಲವು ಕಾರಣಗಳು ಇವೆ. ಇದೇ ಕಾರಣಗಳಿಗೆ ಅವರು ಹೋಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನುಡಿದರು. ಐಟಿ-ಬಿಟಿ ಪ್ರದೇಶಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡುತ್ತಿದ್ದೇವೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ. ಎಲ್ಲವನ್ನೂಸರಿಪಡಿಸುತ್ತೇವೆ ಎಂದರು.

ಇದನ್ನು ಓದಿ: ಪ್ರಿಯಾಂಕ ಖರ್ಗೆಗೆ ಬೆದರಿಕೆ : ಸರ್ಕರ ಗಂಭೀರವಾಗಿ ಪರಿಗಣಿಸಿದೆ ಎಂದ ಹೋಂ ಮಿನಿಸ್ಟರ್‌

ವಿರೋಧ ಪಕ್ಷಗಳ ಶಾಸಕರಿಗೆ ಅನುದಾನ ತಾರತಮ್ಯ ಮಾಡಿಲ್ಲ. ಹೈಕೋರ್ಟ್‌ಗೆ ರಿಟ್ ಸಲ್ಲಿಕೆ ವಿಚಾರ ಗೊತ್ತಿಲ್ಲ. ಎಲ್ಲರಿಗೂ ಅನುದಾನ ಕೊಡುತ್ತಿದ್ದೇವೆ. ಮುಖ್ಯಮಂತ್ರಿಗಳು ಎಲ್ಲರಿಗೂ ೫೦ ಕೋಟಿ ರೂ. ಅನುದಾನ ನೀಡಿದ್ದಾರೆ. ಅವರಿಗೂ (ಪ್ರತಿ ಪಕ್ಷ) ೨೫ ಕೋಟಿ ರೂ. ಅನುದಾನ ನೀಡಿದ್ದಾರೆ. ಬಿಜೆಪಿಯವರು ಅಽಕಾರದಲ್ಲಿದ್ದಾಗ ಏನು ಮಾಡಿದರು ಅಂತ ನೆನಪು ಮಾಡಿಕೊಳ್ಳಬೇಕು. ಈ ಹಿಂದೆ ನಮಗೆ ಕೇವಲ ೫ ಕೋಟಿ ರೂ. ಅನುದಾನ ಕೊಟ್ಟಿದ್ದರು. ಅದನ್ನು ಅವರು ಮರೆಯಬಾರದು. ಹೀಗಿದ್ದರೂ ನಾವು ಯಾರಿಗೂ ತಾರತಮ್ಯ ಮಾಡುತ್ತಿಲ್ಲ. ಲೋಕೋಪಯೋಗಿ ಇಲಾಖೆ ಸೇರಿದಂತೆ ಹಂತ ಹಂತವಾಗಿ ಎಲ್ಲರಿಗೂ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಬೆಂಗಳೂರು, ಕರ್ನಾಟಕಕ್ಕೆ ತನ್ನದೇ ಆದ ಎಕೋ ಸಿಸ್ಟಂ ಇದೆ. ಇಲ್ಲಿನ ಮಾನವ ಸಂಪನ್ಮೂಲ, ಮೂಲ ಸೌಕರ್ಯ, ತಂತ್ರಜ್ಞಾನ ನೋಡಿ ಕೈಗಾಗಿಕೆಗಳು ಬರುತ್ತಿವೆಯೇ ಹೊರತು, ರಸ್ತೆಗಳನ್ನು ನೋಡಿ ಬರುವುದಿಲ್ಲ. ಉದ್ಯಮಿಗಳು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ೧೦ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸಹಿ ಹಾಕಿದ್ದಾರೆ. ಬೆಂಗಳೂರು ಕೈಗಾರಿಕೆಗಳಿಗೆ ಸೂಕ್ತವಲ್ಲದಿದ್ದರೆ ಇಷ್ಟು ದೊಡ್ಡ ಮಟ್ಟದ ಹೂಡಿಕೆ ಆಗುತ್ತಿರಲಿಲ್ಲ. ರಸ್ತೆ ಹಾಳಾಗಿರುವುದು ನಿಜ. ಈ ಬಗ್ಗೆ ಸಿಎಂ, ಡಿಸಿಎಂ ಪ್ರದಕ್ಷಿಣೆ ಮಾಡಿ ರಿಪೇರಿ ಮಾಡಲು ಹಣ ಬಿಡುಗಡೆ ಮಾಡಿದ್ದಾರೆ. ಕೆಲಸವೂ ನಡೆಯುತ್ತಿದೆ. ಯಾರು ಪ್ರತಿಕ್ರಿಯೆ ನೀಡುತ್ತಾರೆ ಅವರಿಗೆ ಕರ್ನಾಟಕದಿಂದ ಕೈಗಾರಿಕೆಗಳು ಹೋಗಬಾರದು ಎಂಬ ಅರಿವಿರಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

31 mins ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

43 mins ago

ಬಿಡುಗಡೆಗೂ ಮುನ್ನವೆ ದಾಖಲೆ ಬರೆದ ಧುರಂಧರ್‌ -2 ; ಮುಂಗಡ ಬುಕ್ಕಿಂಗ್‌ನಲ್ಲಿ ದಾಖಲೆ ಗಳಿಕೆ

ಮುಂಬೈ : ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ‘ಧುರಂಧರ್‌ : ದಿ ರೆವೆಂಜ್‌ನ’ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ…

52 mins ago

ಹೊರ್ಮುಜ್‌ನಲ್ಲಿ ಹಡಗುಯಾನ ಅಡಚಣೆ : ಎಲ್ಲ ದೇಶಗಳಿಗೆ ಎಚ್ಚರಿಕೆ ನೀಡಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ : ಪಶ್ಚಿಮ ಏಷ್ಯಾ ಸಂಘರ್ಷದ ಹಿನ್ನೆಲೆಯಲ್ಲಿ ಹೊರ್ಮುಜ್ ಜಲಸಂಧಿ ಮುಚ್ಚಿದರೆ ಜಾಗತಿಕ ವ್ಯಾಪಾರ ಮತ್ತು ಅಭಿವೃದ್ಧಿ ಕುಂಠಿತದ ಜೊತೆಗೆ…

2 hours ago

ಮೈಸೂರು | ತಾಲ್ಲೂಕು ಕಚೇರಿಗೆ ಆಯುಕ್ತರ ದಿಢೀರ್‌ ಭೇಟಿ, ಕಡತ ಪರಿಶೀಲನೆ

ಮೈಸೂರು : ಮೈಸೂರು ಪ್ರಾದೇಶಿಕ ಆಯುಕ್ತ ನಿತೇಶ್ ಪಾಟೀಲ್ ಅವರು ಬುಧವಾರ ತಾಲ್ಲೂಕು ಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ…

2 hours ago

ರಾಜ್ಯದಲ್ಲಿ ಏ.15ರಿಂದ ವಸತಿ ಗಣತಿ

ಬೆಂಗಳೂರು : ರಾಜ್ಯದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ ’ಮನೆಗಳ ಪಟ್ಟಿ ಮತ್ತು ವಸತಿ ಗಣತಿ’ ಪ್ರಕ್ರಿಯೆ…

2 hours ago