ಮೈಸೂರು

ಬ್ರಾಂಡ್‌ ಬೆಂಗಳೂರು ಇಮೇಜ್‌ ಕೆಡಿಸಲು ಸಾಧ್ಯವಿಲ್ಲ : ಗೃಹ ಸಚಿವ ಪರಂ

ಮೈಸೂರು : ಐಟಿ ದಿಗ್ಗಜರ ಟ್ವೀಟ್‌ಗಳಿಗೆ ಕಿಡಿಕಾರಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಒಂದೆರಡು ರಸ್ತೆಗಳು ಗುಂಡಿ ಬಿದ್ದಿದ್ದನ್ನು ಇಟ್ಟುಕೊಂಡು ಇಮೇಜ್ ಕೆಡಿಸುವ ರಾಜಕಾರಣ ಮಾಡಬೇಡಿ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನಾನು ಯಾರು ಎಂದು ಬಾಯಿ ಬಿಟ್ಟು ಹೇಳುತ್ತಿಲ್ಲ ಅಷ್ಟೇ ಎಂದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆಯಿಂದ ರಸ್ತೆಗಳು ಹಾಳಾಗಿರುವುದು ಸತ್ಯ. ರಸ್ತೆಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ಟ್ವೀಟ್‌ಗಳನ್ನು ಮಾಡಬೇಡಿ. ಯಾರು ಏನೇ ಮಾಡಿದರೂ ಬ್ರಾಂಡ್ ಬೆಂಗಳೂರಿನ ಇಮೇಜ್ ಕೆಡಿಸಲು ಸಾಧ್ಯವಿಲ್ಲ. ಗೂಗಲ್ ಕಂಪೆನಿ ಆಂಧ್ರಪ್ರದೇಶಕ್ಕೆ ಹೋಗಲು ಅವರದ್ದೇ ಆದ ಕೆಲವು ಕಾರಣಗಳು ಇವೆ. ಇದೇ ಕಾರಣಗಳಿಗೆ ಅವರು ಹೋಗಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ ಎಂದು ನುಡಿದರು. ಐಟಿ-ಬಿಟಿ ಪ್ರದೇಶಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸುವ ಕೆಲಸ ಮಾಡುತ್ತಿದ್ದೇವೆ. ಕೆಲವರು ಇದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ ಅಷ್ಟೇ. ಎಲ್ಲವನ್ನೂಸರಿಪಡಿಸುತ್ತೇವೆ ಎಂದರು.

ಇದನ್ನು ಓದಿ: ಪ್ರಿಯಾಂಕ ಖರ್ಗೆಗೆ ಬೆದರಿಕೆ : ಸರ್ಕರ ಗಂಭೀರವಾಗಿ ಪರಿಗಣಿಸಿದೆ ಎಂದ ಹೋಂ ಮಿನಿಸ್ಟರ್‌

ವಿರೋಧ ಪಕ್ಷಗಳ ಶಾಸಕರಿಗೆ ಅನುದಾನ ತಾರತಮ್ಯ ಮಾಡಿಲ್ಲ. ಹೈಕೋರ್ಟ್‌ಗೆ ರಿಟ್ ಸಲ್ಲಿಕೆ ವಿಚಾರ ಗೊತ್ತಿಲ್ಲ. ಎಲ್ಲರಿಗೂ ಅನುದಾನ ಕೊಡುತ್ತಿದ್ದೇವೆ. ಮುಖ್ಯಮಂತ್ರಿಗಳು ಎಲ್ಲರಿಗೂ ೫೦ ಕೋಟಿ ರೂ. ಅನುದಾನ ನೀಡಿದ್ದಾರೆ. ಅವರಿಗೂ (ಪ್ರತಿ ಪಕ್ಷ) ೨೫ ಕೋಟಿ ರೂ. ಅನುದಾನ ನೀಡಿದ್ದಾರೆ. ಬಿಜೆಪಿಯವರು ಅಽಕಾರದಲ್ಲಿದ್ದಾಗ ಏನು ಮಾಡಿದರು ಅಂತ ನೆನಪು ಮಾಡಿಕೊಳ್ಳಬೇಕು. ಈ ಹಿಂದೆ ನಮಗೆ ಕೇವಲ ೫ ಕೋಟಿ ರೂ. ಅನುದಾನ ಕೊಟ್ಟಿದ್ದರು. ಅದನ್ನು ಅವರು ಮರೆಯಬಾರದು. ಹೀಗಿದ್ದರೂ ನಾವು ಯಾರಿಗೂ ತಾರತಮ್ಯ ಮಾಡುತ್ತಿಲ್ಲ. ಲೋಕೋಪಯೋಗಿ ಇಲಾಖೆ ಸೇರಿದಂತೆ ಹಂತ ಹಂತವಾಗಿ ಎಲ್ಲರಿಗೂ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಬೆಂಗಳೂರು, ಕರ್ನಾಟಕಕ್ಕೆ ತನ್ನದೇ ಆದ ಎಕೋ ಸಿಸ್ಟಂ ಇದೆ. ಇಲ್ಲಿನ ಮಾನವ ಸಂಪನ್ಮೂಲ, ಮೂಲ ಸೌಕರ್ಯ, ತಂತ್ರಜ್ಞಾನ ನೋಡಿ ಕೈಗಾಗಿಕೆಗಳು ಬರುತ್ತಿವೆಯೇ ಹೊರತು, ರಸ್ತೆಗಳನ್ನು ನೋಡಿ ಬರುವುದಿಲ್ಲ. ಉದ್ಯಮಿಗಳು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ೧೦ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಸಹಿ ಹಾಕಿದ್ದಾರೆ. ಬೆಂಗಳೂರು ಕೈಗಾರಿಕೆಗಳಿಗೆ ಸೂಕ್ತವಲ್ಲದಿದ್ದರೆ ಇಷ್ಟು ದೊಡ್ಡ ಮಟ್ಟದ ಹೂಡಿಕೆ ಆಗುತ್ತಿರಲಿಲ್ಲ. ರಸ್ತೆ ಹಾಳಾಗಿರುವುದು ನಿಜ. ಈ ಬಗ್ಗೆ ಸಿಎಂ, ಡಿಸಿಎಂ ಪ್ರದಕ್ಷಿಣೆ ಮಾಡಿ ರಿಪೇರಿ ಮಾಡಲು ಹಣ ಬಿಡುಗಡೆ ಮಾಡಿದ್ದಾರೆ. ಕೆಲಸವೂ ನಡೆಯುತ್ತಿದೆ. ಯಾರು ಪ್ರತಿಕ್ರಿಯೆ ನೀಡುತ್ತಾರೆ ಅವರಿಗೆ ಕರ್ನಾಟಕದಿಂದ ಕೈಗಾರಿಕೆಗಳು ಹೋಗಬಾರದು ಎಂಬ ಅರಿವಿರಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

2 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

2 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

2 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

4 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

5 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

5 hours ago