ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ ನಿಯಮವಿದೆ. ಈ ನಿಯಮ ಮೈಸೂರು ಅರಮನೆ ವೀಕ್ಷಣೆಗೂ ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರಮನೆ ಉಳಿಯುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಯಮಾರ್ತಾಂಡ ದ್ವಾರದ ಬಳಿ ಬಲೂನ್ಗೆ ತುಂಬಿಸುವ ಹೀಲಿಯಂ ಸಿಲಿಂಡರ್ ಸಿಡಿದು ಮೂವರು ಸಾವನ್ನಪ್ಪಿದ್ದಾರೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.
ಮೈಸೂರು ಅರಮನೆ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಇದೊಂದು ಪಾರಂಪರಿಕ ಕಟ್ಟಡ. ಇಂತಹ ಅರಮನೆಯನ್ನು ಮತ್ತೆ ಕಟ್ಟಲು ಸಾಧ್ಯವಿಲ್ಲ, ಇದರ ಅರಿವು ಜಿಲ್ಲಾಡಳಿತಕ್ಕಾಗಲಿ ಸಂಬಂಧಪಟ್ಟ ಮಂತ್ರಿಗಳಿಗಾಗಲಿ ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.
ಇದನ್ನು ಓದಿ: ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು.!
ಘಟನೆ ನಡೆದ ಸ್ಥಳದಲ್ಲಿ ಸಿಸಿ ಕ್ಯಾಮರಾ ಇದೆ. ಆದರೆ ಅದು ಕೆಟ್ಟು ನಿಂತಿದೆ ಎಂಬ ಮಾಹಿತಿ ಇದೆ. ಕಡಿಮೆ ಹಣದಲ್ಲಿ ಸಿಸಿ ಟಿವಿ ಹಾಕಿದ್ದಾರೆ. ಹೀಗಾದಲ್ಲಿ ನಡೆದ ಘಟನೆಯ ವಾಸ್ತವ ತಿಳಿಯುವುದು ಹೇಗೆ ಎಂದು ಪ್ರಶ್ನಿಸಿದರು.
ಮೈಸೂರು ಪಾರಂಪರಿಕ ಕಟ್ಟಡಗಳ ನಗರ. ಆದರೆ, ನಗರದಲ್ಲಿರುವ ಜಿಲ್ಲಾಧಿಕಾರಿ ಹಳೆ ಕಚೇರಿಯಲ್ಲಿ ಇಂದು ನಾಯಿ, ನರಿಗಳು ಮಲಗುತ್ತಿವೆ. ಅಗ್ನಿಶಾಮಕ ದಳದ ದ್ವಾರ ಬಿದ್ದು ವರ್ಷಗಳೇ ಕಳೆದರೂ ಕ್ರಮ ಕೈಗೊಂಡಿಲ್ಲ. ಇಲ್ಲಿ ಜಿಲ್ಲಾಡಳಿತಕ್ಕೂ ಜವಾಬ್ದಾರಿ ಇಲ್ಲ. ನಗರಪಾಲಿಕೆ ಆಯುಕ್ತರಿಗೂ ಜವಾಬ್ದಾರಿ ಇಲ್ಲ ಎಂದು ಕಿಡಿಕಾರಿದರು.
ಅರಮನೆಯಲ್ಲಿ ಪ್ರವೇಶ ಶುಲ್ಕ ಹೆಚ್ಚುತ್ತಿದೆ. ವಾಹನ ನಿಲ್ದಾಣ, ಚಪ್ಪಲಿ ಸ್ಟ್ಯಾಂಡ್ ಎಲ್ಲದಕ್ಕೂ ದುಡ್ಡು ವಸೂಲಾಗುತ್ತಿದೆ. ಪೊಲೀಸರು ಸಿಕ್ಕಸಿಕ್ಕವರನ್ನು ಅರಮನೆ ಒಳಗೆ ಬಿಡುತ್ತಿದ್ದಾರೆ. ಎಲ್ಲಾ ಕಡೆ ಹಣ ವಸೂಲಿಯಾಗುತ್ತಿದೆ. ಅರಮನೆ ಒಳಗೆ ಬರುವವರನ್ನು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…