ಮೈಸೂರು

ಮೈಸೂರು ಅರಮನೆ ವೀಕ್ಷಣೆಗೂ ಬಕಿಂಗ್ಹ್ಯಾಮ್ ಅರಮನೆ ಮಾದರಿ ತರಲಿ : ವಿಶ್ವನಾಥ್‌ ಆಗ್ರಹ

ಮೈಸೂರು : ಲಂಡನ್‌ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ ನಿಯಮವಿದೆ. ಈ ನಿಯಮ ಮೈಸೂರು ಅರಮನೆ ವೀಕ್ಷಣೆಗೂ ಅಳವಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರಮನೆ ಉಳಿಯುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಆತಂಕ ವ್ಯಕ್ತಪಡಿಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಯಮಾರ್ತಾಂಡ ದ್ವಾರದ ಬಳಿ ಬಲೂನ್‌ಗೆ ತುಂಬಿಸುವ ಹೀಲಿಯಂ ಸಿಲಿಂಡರ್ ಸಿಡಿದು ಮೂವರು ಸಾವನ್ನಪ್ಪಿದ್ದಾರೆ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಮೈಸೂರು ಅರಮನೆ ವಿಶ್ವದಲ್ಲಿಯೇ ಪ್ರಸಿದ್ಧಿ ಪಡೆದಿದೆ. ಇದೊಂದು ಪಾರಂಪರಿಕ ಕಟ್ಟಡ. ಇಂತಹ ಅರಮನೆಯನ್ನು ಮತ್ತೆ ಕಟ್ಟಲು ಸಾಧ್ಯವಿಲ್ಲ, ಇದರ ಅರಿವು ಜಿಲ್ಲಾಡಳಿತಕ್ಕಾಗಲಿ ಸಂಬಂಧಪಟ್ಟ ಮಂತ್ರಿಗಳಿಗಾಗಲಿ ಏಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನು ಓದಿ: ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಘಟನೆ ನಡೆದ ಸ್ಥಳದಲ್ಲಿ ಸಿಸಿ ಕ್ಯಾಮರಾ ಇದೆ. ಆದರೆ ಅದು ಕೆಟ್ಟು ನಿಂತಿದೆ ಎಂಬ ಮಾಹಿತಿ ಇದೆ. ಕಡಿಮೆ ಹಣದಲ್ಲಿ ಸಿಸಿ ಟಿವಿ ಹಾಕಿದ್ದಾರೆ. ಹೀಗಾದಲ್ಲಿ ನಡೆದ ಘಟನೆಯ ವಾಸ್ತವ ತಿಳಿಯುವುದು ಹೇಗೆ ಎಂದು ಪ್ರಶ್ನಿಸಿದರು.

ಮೈಸೂರು ಪಾರಂಪರಿಕ ಕಟ್ಟಡಗಳ ನಗರ. ಆದರೆ, ನಗರದಲ್ಲಿರುವ ಜಿಲ್ಲಾಧಿಕಾರಿ ಹಳೆ ಕಚೇರಿಯಲ್ಲಿ ಇಂದು ನಾಯಿ, ನರಿಗಳು ಮಲಗುತ್ತಿವೆ. ಅಗ್ನಿಶಾಮಕ ದಳದ ದ್ವಾರ ಬಿದ್ದು ವರ್ಷಗಳೇ ಕಳೆದರೂ ಕ್ರಮ ಕೈಗೊಂಡಿಲ್ಲ. ಇಲ್ಲಿ ಜಿಲ್ಲಾಡಳಿತಕ್ಕೂ ಜವಾಬ್ದಾರಿ ಇಲ್ಲ. ನಗರಪಾಲಿಕೆ ಆಯುಕ್ತರಿಗೂ ಜವಾಬ್ದಾರಿ ಇಲ್ಲ ಎಂದು ಕಿಡಿಕಾರಿದರು.

ಅರಮನೆಯಲ್ಲಿ ಪ್ರವೇಶ ಶುಲ್ಕ ಹೆಚ್ಚುತ್ತಿದೆ. ವಾಹನ ನಿಲ್ದಾಣ, ಚಪ್ಪಲಿ ಸ್ಟ್ಯಾಂಡ್ ಎಲ್ಲದಕ್ಕೂ ದುಡ್ಡು ವಸೂಲಾಗುತ್ತಿದೆ. ಪೊಲೀಸರು ಸಿಕ್ಕಸಿಕ್ಕವರನ್ನು ಅರಮನೆ ಒಳಗೆ ಬಿಡುತ್ತಿದ್ದಾರೆ. ಎಲ್ಲಾ ಕಡೆ ಹಣ ವಸೂಲಿಯಾಗುತ್ತಿದೆ. ಅರಮನೆ ಒಳಗೆ ಬರುವವರನ್ನು ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

1 min ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

10 hours ago