ಮೈಸೂರು

ಜಿಲ್ಲೆಯ ಕುಂದುಕೊರೆತೆ ಸರಿಪಡಿಸಲು ʼಎಕ್ಸ್‌ʼ ಮೂಲಕ ಸಿಎಂ ಗಮನಕ್ಕೆ ತನ್ನಿ!

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸುಜ್ಜಲೂರು ಗ್ರಾಮದ ದಲಿತ ಸಮುದಾಯ ಬಡವಾಣೆಯಲ್ಲಿ ರಸ್ತೆ ಮತ್ತು ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾದ ಪರಿಣಾಮ ನೈರ್ಮಲ್ಯತೆ ಇಲ್ಲದಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ, ತಹಶೀಲ್ದಾರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಂತ್ರಿಕ ಸಹಾಯಕ ಅಭಿಯಂತರರು ಮತ್ತು ಪಿಡಿಓರವರು ಮೈಸೂರು ಜಿಲ್ಲಾ ಪಂಚಾಯತ್‌ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಸದರಿ ಜಾಗವು ಗ್ರಾಮದ ಕೊನೆಯ ಭಾಗವಾಗಿರುವುದರಿಂದ ಚರಂಡಿ ನೀರು ಹೊರಗಡೆ ಹೋಗಲು ಯಾವುದೇ ರೀತಿಯ ಸರ್ಕಾರಿ ಜಾಗದ ವ್ಯವಸ್ಥೆ ಇರುವುದಿಲ್ಲ. ಸದ್ಯ ಚರಂಡಿ ನೀರು ಮನೆಗಳಿಗೆ ನುಗ್ಗದಂತೆ ನೋಡಿಕೊಳ್ಳಲು ಇಂಗುಗುಂಡಿಗಳನ್ನು ನಿರ್ಮಾಣ ಮಾಡಿದ್ದು, ಹೆಚ್ಚುವರಿಯಾಗಿ ಮೋಟಾರ್‌ ವ್ಯವಸ್ಥೆಯನ್ನು ಮಾಡಲಾಗಿದೆ.

ಬಡಾವಣೆ ಜನರಿಗೆ ಶಾಶ್ವತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ, ಗೃಹ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಯಾವುದೇ ಸಾರ್ವಜನಿಕ ಸ್ಥಳ ಲಭ್ಯವಿಲ್ಲದೇ ಇರುವುದರಿಂದ ಖಾಸಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲು ತಹಶೀಲ್ದಾರ್‌ರೊಂದಿಗೆ ಚರ್ಚಿಸಲಾಗಿದ್ದು, ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಯಮಾನುಸಾರ ಗೃಹ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮೈಸೂರು ಜಿಲ್ಲಾ ಪಂಚಾಯತ್‌ ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್‌ʼ ಖಾತೆಗೆ ಟ್ಯಾಗ್‌ ಮಾಡಿ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…

1 min ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

30 mins ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

3 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

3 hours ago

ಹೊಸ ವರ್ಷಕ್ಕೆ ಇಂದಿರಾ ಕಿಟ್

ಗಿರೀಶ್ ಹುಣಸೂರು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಪ್ರಯೋಜನ ಮೈಸೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಹೊಸ ವರ್ಷಾರಂಭದ ಜನವರಿ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ…

3 hours ago