ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಸುಜ್ಜಲೂರು ಗ್ರಾಮದ ದಲಿತ ಸಮುದಾಯ ಬಡವಾಣೆಯಲ್ಲಿ ರಸ್ತೆ ಮತ್ತು ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾದ ಪರಿಣಾಮ ನೈರ್ಮಲ್ಯತೆ ಇಲ್ಲದಂತಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು. ಇದನ್ನು ಗಮನಿಸಿದ ಮುಖ್ಯಮಂತ್ರಿಗಳ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.
ಅದರಂತೆ, ತಹಶೀಲ್ದಾರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಂತ್ರಿಕ ಸಹಾಯಕ ಅಭಿಯಂತರರು ಮತ್ತು ಪಿಡಿಓರವರು ಮೈಸೂರು ಜಿಲ್ಲಾ ಪಂಚಾಯತ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಸದರಿ ಜಾಗವು ಗ್ರಾಮದ ಕೊನೆಯ ಭಾಗವಾಗಿರುವುದರಿಂದ ಚರಂಡಿ ನೀರು ಹೊರಗಡೆ ಹೋಗಲು ಯಾವುದೇ ರೀತಿಯ ಸರ್ಕಾರಿ ಜಾಗದ ವ್ಯವಸ್ಥೆ ಇರುವುದಿಲ್ಲ. ಸದ್ಯ ಚರಂಡಿ ನೀರು ಮನೆಗಳಿಗೆ ನುಗ್ಗದಂತೆ ನೋಡಿಕೊಳ್ಳಲು ಇಂಗುಗುಂಡಿಗಳನ್ನು ನಿರ್ಮಾಣ ಮಾಡಿದ್ದು, ಹೆಚ್ಚುವರಿಯಾಗಿ ಮೋಟಾರ್ ವ್ಯವಸ್ಥೆಯನ್ನು ಮಾಡಲಾಗಿದೆ.
ಬಡಾವಣೆ ಜನರಿಗೆ ಶಾಶ್ವತ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ, ಗೃಹ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಯಾವುದೇ ಸಾರ್ವಜನಿಕ ಸ್ಥಳ ಲಭ್ಯವಿಲ್ಲದೇ ಇರುವುದರಿಂದ ಖಾಸಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳಲು ತಹಶೀಲ್ದಾರ್ರೊಂದಿಗೆ ಚರ್ಚಿಸಲಾಗಿದ್ದು, ಕಂದಾಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ನಂತರ ನಿಯಮಾನುಸಾರ ಗೃಹ ತ್ಯಾಜ್ಯ ನೀರಿನ ನಿರ್ವಹಣೆ ಕಾಮಗಾರಿಯನ್ನು ಪ್ರಾರಂಭಿಸಲಾಗುವುದು ಎಂದು ಮೈಸೂರು ಜಿಲ್ಲಾ ಪಂಚಾಯತ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಿ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…