ಮೈಸೂರು

ನಾಲೆಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ನೀರು ಪಾಲು

ಮೈಸೂರು: ತಾಲ್ಲೂಕಿನ ಬಡಗಲಹುಂಡಿ ಗ್ರಾಮದ ಬಳಿ ನಾಲೆಗೆ ಬಿದ್ದ ಬಾಲಕನನ್ನು ರಕ್ಷಿಸಲು ಹೋಗಿ ಸಹೋದರರು ನೀರು ಪಾಲಾಗಿರುವ ಘಟನೆ ನಡೆದಿದೆ.

ನಂದನ್‌ ಹಾಗೂ ರಾಕೇಶ್‌ ಎಂಬುವವರೇ ಮೃತ ದುರ್ದೈವಿಗಳಾಗಿದ್ದಾರೆ. ಬಡಗಲಹುಂಡಿ ಗ್ರಾಮದ ರಮೇಶ್‌ ಪುತ್ರರಾದ ನಂದನ್‌ ಹಾಗೂ ರಾಕೇಶ್‌ ಅವರು ವರುಣ ನಾಲೆಯಲ್ಲಿ ನೀರಿನಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾರೆ.

ನಾಲೆಯಲ್ಲಿ ಕೊಂಬೆ ಹಿಡಿದುಕೊಂಡಿದ್ದ ಬಾಲಕನ ರಕ್ಷಣೆಗೆ ಇಬ್ಬರು ಧಾವಿಸಿದ್ದಾರೆ. ಈ ವೇಳೆ ನಾಲೆಯಲ್ಲಿ ಕೊಚ್ಚಿಕೊಂಡು ಹೋಗಿ ಸಾವನ್ನಪ್ಪಿದ್ದಾರೆ. ಮರದ ಕೊಂಬೆ ನೆರವಿನಿಂದ ಬಾಲಕ ಪಾರಾಗಿದ್ದಾನೆ.

ಈ ಸಂಬಂಧ ವರುಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆ.ಆರ್.‌ಆಸ್ಪತ್ರೆಯಲ್ಲಿ ಯುವಕರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಇನ್ನು ಮೃತ ನಂದನ್‌ ಕಳೆದ 15 ದಿನಗಳ ಹಿಂದೆಯಷ್ಟೇ ಪ್ರೀತಿಸಿ ವಿವಾಹವಾಗಿದ್ದ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

8 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

12 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

12 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

12 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

13 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

13 hours ago