ಮೈಸೂರು: ಸೂಕ್ತ ಕಾರಣವಿಲ್ಲದೇ ನನ್ನ ನಾಮಪತ್ರವನ್ನು ತಿರಸ್ಕರಿಸಿದ ಕಾರಣ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಆಯ್ಕೆಯನ್ನು ಅಸಿಂಧು ಗೊಳಿಸಿ, ಈ ಕ್ಷೇತ್ರಕ್ಕೆ ಮತ್ತೊಮ್ಮೆ ಚುನಾವಣೆ ನಡೆಸಬೇಕು ಎಂದು ಬಿಎಸ್ಪಿ (ಬಹುಜನ ಸಮಾಜ ಪಾರ್ಟಿ) ಪಕ್ಷದ ರೇವತಿ ರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ತಮ್ಮ ನಾಮಪತ್ರವನ್ನು ಯಾವುದೇ ಕಾರಣವಿಲ್ಲದೇ ಜಿಲ್ಲಾ ಚುನಾವಣಾಧಿಕಾರಿಗಳ ತಿರಸ್ಕರಿಸುವ ಮೂಲಕ ನನ್ನನ್ನು ಚುನಾವಣೆಯಲ್ಲಿ ನಿಲ್ಲದಂತೆ ಮಾಡಿದ್ದಾರೆ. ಈ ಕ್ರಮದ ಬಗ್ಗೆ ನ್ಯಾಯಾಲಯ ಕ್ರಮ ಕೈಗೊಳ್ಳಬೇಕು ಎಂದು ರೇವತಿರಾಜ್ ಅಲಿಯಾಸ್ ಭೀಮ ಪುತ್ರಿ ರೇವತಿ ರಾಜ್ ಚುನಾವಣಾ ಆಯೋಗದ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯಲ್ಲೇನಿದೆ?: ಅರ್ಜಿದಾರರು ಏ.4 2024 ರಂದು ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿ ಕಾಲಂ 7, 7(A), 7(a)(b) ಗಳನ್ನು ಸರಿಯಾಗಿ ಭರ್ತಿ ಮಾಡಿಲ್ಲ ಎಂದು ಚುನಾವಣಾಧಿಕಾರಿಗಳು ಅರ್ಜಿ ತಿರಸ್ಕರಿಸಿದ್ದರು. ಬಳಿ ಏ.5ರ ಬೆಳಿಗ್ಗೆ 11ರ ಒಳಗಾಗಿ ಎಲ್ಲವನ್ನು ಸರಿಯಾಗಿ ಭರ್ತಿ ಮಾಡಿ ಅರ್ಜಿ ಸಲ್ಲಿಸಿದರೂ ಕೂಡಾ ಅರ್ಜಿ ಸರಿಯಾದ ಸಮಯಕ್ಕೆ ಬಂದಿಲ್ಲ ಎಂದು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರು. ಈ ಸಂಬಂಧ ಚುನಾವಣಾ ಆಯುಕ್ತರಿಗೆ ದೂರು ನೀಡಿದ್ರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
ಸಕಾರಣವಿಲ್ಲದೇ ಚುನಾವಣಾ ಅಧಿಕಾರಿಗಳು ತಮ್ಮ ಅರ್ಜಿಯನ್ನು ತಿರಸ್ಕರಿಸಿದ್ದು, ಇದೊಂದು ಕಾನೂನು ಬಾಹಿರವಾಗಿದೆ. ಈ ಕೂಡಲೇ ಯದುವೀರ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಮರುಚುನಾವಣೆ ನಡೆಸಬೇಕು ಎಂದು ರೇವತಿ ರಾಜ್ ಅರ್ಜಿಯಲ್ಲಿ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…