ಮೈಸೂರು

ಬುದ್ಧಧಮ್ಮ ಅನುಭವದ ಮೇಲೆ ನಿಂತಿದೆ: ಭಗವಾನ್

ಪಬ್ಬಜ ಶಿಬಿರ ಸವಾರೋಪ ಸಮಾರಂಭ ಉದ್ಘಾಟನೆ.

ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ತಿಳಿಸಿದರು.

ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಮತ್ತು ಭಾರತೀಯ ಬೌದ್ಧ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಬ್ಬಜ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರು ಹಿಂದೂ ಧರ್ಮವನ್ನು ಟೀಕಿಸಿದಷ್ಟು ಬೇರಾರೂ ಟೀಕಿಸಿಲ್ಲ. ದೀನ-ದಲಿತರನ್ನು ಹಿಂದೂ ಧರ್ಮವು ತುಳಿದಷ್ಟು ಪ್ರಪಂಚದ ಬೇರಾವ ಧರ್ಮಗಳೂ ತುಳಿಯಲಿಲ್ಲ ಎಂದು ಹೇಳಿದರು.

ಇದೇ ವೇಳೆ ವಿಶ್ವಮೈತ್ರಿ ಬುದ್ಧವಿಹಾರದ ಡಾ.ಕಲ್ಯಾಣ ಸಿರಿ ಭಂತೇಜಿ ಅವರು ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಕರ್ನಾಟಕ ಬುದ್ಧಧಮ್ಮ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ, ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಮಹೇಂದ್ರ ಮಂಕಾಳೆ, ಬೀದರ್‌ನ ಅಣದೂರು ಬುದ್ಧವಿಹಾರದ ಸಂಘಮಿತ್ರ ಭಂತೇಜಿ, ಸಂಘ ಸೇವಕ ಭಂತೇಜಿ, ಹೋರಾಟಗಾರ ಮಂಟೇಲಿಂಗಯ್ಯ, ಉಪಾಸಕರಾದ ಮನೋಹರ್ ಮೌರ್ಯ ಬಾಬುರಾವ್ ಅಣದೊರೆ, ಅರ್ಜುನ್‌ರಾವ್ ಕೇಸರಿ, ಕರ್ನಾಟಕ ಬುದ್ಧಧಮ್ಮ ಸಮಿತಿ ಸಹ ಕಾರ್ಯದರ್ಶಿ ಎಚ್.ಶಿವರಾಜು, ನಿವೃತ್ತ ಇಂಜಿನಿಯರ್ ಆರ್.ನಟರಾಜು, ವಕೀಲ ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಟಿ.ಎಂ.ನಾಗರಾಜು, ಡಾ.ಜಗದೀಶ್, ಡಾ.ಜಗನ್ನಾಥ್, ಶಾಂತಿ ಮಂಜು, ಉತ್ತಂಬಳ್ಳಿ ನಾಗರಾಜು, ಮಾ ನಾಗಯ್ಯ  ಪ್ರೊ.ಅಮೂಲ್ಯ, ಡಾ.ಮಂಜು ಸತ್ತಿಗೆಹುಂಡಿ, ನಿರಂಜನ್, ಮೂರ್ತಿ, ಚನ್ನಪಟ್ಟಣ ಲಕ್ಷ್ಮಣ್, ಸಂಶೋಧಕ ರೂಪೇಶ್, ಸುರೇಶ್ ಕಂದೇಗಾಲ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಂಶೋಧಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

andolana

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

31 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

32 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

35 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

36 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

44 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

51 mins ago