ಮೈಸೂರು

ಬುದ್ಧಧಮ್ಮ ಅನುಭವದ ಮೇಲೆ ನಿಂತಿದೆ: ಭಗವಾನ್

ಪಬ್ಬಜ ಶಿಬಿರ ಸವಾರೋಪ ಸಮಾರಂಭ ಉದ್ಘಾಟನೆ.

ಮೈಸೂರು: ಸ್ವಾಮಿ ವಿವೇಕಾನಂದರನ್ನು ಕೇವಲ ಹಿಂದೂಧರ್ಮಕ್ಕೆ ಮಾತ್ರ ಸೀಮಿತ ಮಾಡಿದ್ದಾರೆ. ವಾಸ್ತವವಾಗಿ ನೋಡಿದರೆ ವಿವೇಕಾನಂದರು ಹಿಂದೂ ಧರ್ಮವನ್ನು ಒಪ್ಪಿಕೊಂಡಿರಲಿಲ್ಲ. ಅವರ ಸಂಪುಟಗಳನ್ನು ಓದಿದಾಗ ಬುದ್ಧರನ್ನು ಅಪಾರವಾಗಿ ಇಷ್ಟಪಡುತ್ತಿದ್ದರು ಎಂದು ಪ್ರಗತಿಪರ ಚಿಂತಕ ಕೆ.ಎಸ್.ಭಗವಾನ್ ತಿಳಿಸಿದರು.

ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧವಿಹಾರದಲ್ಲಿ ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾ ಮತ್ತು ಭಾರತೀಯ ಬೌದ್ಧ ಮಹಾಸಭಾದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಪಬ್ಬಜ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರು ಹಿಂದೂ ಧರ್ಮವನ್ನು ಟೀಕಿಸಿದಷ್ಟು ಬೇರಾರೂ ಟೀಕಿಸಿಲ್ಲ. ದೀನ-ದಲಿತರನ್ನು ಹಿಂದೂ ಧರ್ಮವು ತುಳಿದಷ್ಟು ಪ್ರಪಂಚದ ಬೇರಾವ ಧರ್ಮಗಳೂ ತುಳಿಯಲಿಲ್ಲ ಎಂದು ಹೇಳಿದರು.

ಇದೇ ವೇಳೆ ವಿಶ್ವಮೈತ್ರಿ ಬುದ್ಧವಿಹಾರದ ಡಾ.ಕಲ್ಯಾಣ ಸಿರಿ ಭಂತೇಜಿ ಅವರು ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿದರು. ಕರ್ನಾಟಕ ಬುದ್ಧಧಮ್ಮ ಸಮಿತಿ ಪ್ರಧಾನ ಕಾರ್ಯದರ್ಶಿ ಆರ್.ಮಹಾದೇವಪ್ಪ, ಭಾರತೀಯ ಬೌದ್ಧ ಮಹಾಸಭಾದ ಉಪಾಧ್ಯಕ್ಷ ಮಹೇಂದ್ರ ಮಂಕಾಳೆ, ಬೀದರ್‌ನ ಅಣದೂರು ಬುದ್ಧವಿಹಾರದ ಸಂಘಮಿತ್ರ ಭಂತೇಜಿ, ಸಂಘ ಸೇವಕ ಭಂತೇಜಿ, ಹೋರಾಟಗಾರ ಮಂಟೇಲಿಂಗಯ್ಯ, ಉಪಾಸಕರಾದ ಮನೋಹರ್ ಮೌರ್ಯ ಬಾಬುರಾವ್ ಅಣದೊರೆ, ಅರ್ಜುನ್‌ರಾವ್ ಕೇಸರಿ, ಕರ್ನಾಟಕ ಬುದ್ಧಧಮ್ಮ ಸಮಿತಿ ಸಹ ಕಾರ್ಯದರ್ಶಿ ಎಚ್.ಶಿವರಾಜು, ನಿವೃತ್ತ ಇಂಜಿನಿಯರ್ ಆರ್.ನಟರಾಜು, ವಕೀಲ ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಟಿ.ಎಂ.ನಾಗರಾಜು, ಡಾ.ಜಗದೀಶ್, ಡಾ.ಜಗನ್ನಾಥ್, ಶಾಂತಿ ಮಂಜು, ಉತ್ತಂಬಳ್ಳಿ ನಾಗರಾಜು, ಮಾ ನಾಗಯ್ಯ  ಪ್ರೊ.ಅಮೂಲ್ಯ, ಡಾ.ಮಂಜು ಸತ್ತಿಗೆಹುಂಡಿ, ನಿರಂಜನ್, ಮೂರ್ತಿ, ಚನ್ನಪಟ್ಟಣ ಲಕ್ಷ್ಮಣ್, ಸಂಶೋಧಕ ರೂಪೇಶ್, ಸುರೇಶ್ ಕಂದೇಗಾಲ, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಂಶೋಧಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

andolana

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago