ಮೈಸೂರು

ಅ.14,15 ರಂದು ಮೈಸೂರಲ್ಲಿ ಬೌದ್ಧ ಮಹಾ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಬಿಕ್ಕು ಸಂಘ, ರಾಜ್ಯ ಬೌದ್ಧ ಸಂಘ-ಸಂಸ್ಥೆ, ರಾಜ್ಯ ಅಂಬೇಡ್ಕರ್ ವಾದಿ ಸಂಘ-ಸಂಸ್ಥೆಗಳು ಮತ್ತು ವಿಶ್ವ ಮೈತ್ರಿ ಬುದ್ಧವಿಹಾರದ ವತಿಯಿಂದ ಅ.೧೪ ಮತ್ತು ೧೫ರಂದು ಬೌದ್ಧ ಮಹಾ ಸಮ್ಮೇಳನ ಮಾನವ ಮೈತ್ರಿ ಆಯೋಜಿಸಲಾಗಿದೆ ಎಂದು ಮಾಜಿ ಮಹಾಪೌರ ಪುರುಷೋತ್ತಮ್ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಮೈಸೂರಿನ ಮಹಾ ರಾಜ ಕಾಲೇಜು ಮೈದಾನದಲ್ಲಿ ಸಮ್ಮೇಳನ ನಡೆಯಲಿದ್ದು, ಅ.೧೪, ೧೫ರಂದು ಎರಡು ದಿನಗಳು ಅಂತಾ ರಾಷ್ಟ್ರೀಯ ಬೌದ್ಧ ಸಾಂಸ್ಕೃತಿಕ ಸಂಗಮದ ಮೂಲಕ ಮಾನವ ಮೈತ್ರಿಯ ಪಯಣವನ್ನು ಹಮ್ಮಿಕೊಂಡಿದ್ದು, ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಬಿಕ್ಕುಗಳನ್ನು ಗೌರವಿಸಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:-ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ ; ನನ್ನ ಅದೃಷ್ಟದ ಮನೆಯೇ ಬೇರೆ : ಸಿಎಂ ಸಿದ್ದರಾಮಯ್ಯ

ಧ್ಯಾನ, ಚಿಂತನೆ ಮತ್ತು ವಿಚಾರಗಳನ್ನು ಒಳಗೊಂಡ ಐತಿಹಾಸಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಅಂಬೇಡ್ಕರ್ ಅವರಂತೆ ದೇಶದಾದ್ಯಂತ ಬೌದ್ಧ ಚಿಂತನೆಗಳನ್ನು ಬಿತ್ತುತ್ತಾ ಸಾಗುತ್ತಿರುವ ರಾಜ್ಯ ಮತ್ತು ರಾಷ್ಟ್ರಮಟ್ಟದ ಬಿಕ್ಕುಗಳು, ಧಮ್ಮ ಮಹಾಮಾತ್ರರು, ಬೌದ್ಧ ಚಿಂತಕರು ಸೇರಿದಂತೆ ವಿವಿಧ ಸಂಘಟನೆಗಳ ಪದಾಽಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಮ್ಮೇಳನಕ್ಕೆ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಹ್ವಾನಿಸಬೇಕಿತ್ತು. ಆದರೆ, ಅವರ ಅನಾರೋಗ್ಯದ ಕಾರಣ ಸಾಧ್ಯವಾಗಿಲ್ಲ. ಆರೋಗ್ಯ ಸರಿಯಾದರೆ ಅವರನ್ನು ಮುಖ್ಯ ಅತಿಥಿಗಳಾಗಿ ಆಹ್ವಾನಿಸುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಸುನೀಲ್ ಬೋಸ್ ಸೇರಿದಂತೆ ಎಲ್ಲಾ ಜನ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

36 mins ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

40 mins ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

45 mins ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

56 mins ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

1 hour ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

1 hour ago