ಮೈಸೂರು

ಗ್ರಾಮೀಣ ಶೈಲಿಯಲ್ಲಿ ಎತ್ತಿನಗಾಡಿ ಏರಿ ಮತದಾನ ಜಾಗೃತಿ

ಮೈಸೂರು:  ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವಿಪ್ ಸಮಿತಿ ವತಿಯಿಂದ ಗ್ರಾಮೀಣ‌ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.

ನಂಜನಗೂಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಯಿತು.

ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.

ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು‌.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಅಯೋಧ್ಯೆಯಲ್ಲಿ ಗಣಪತಿ ಆಶ್ರಮ ಶಾಖೆ ಉದ್ಘಾಟನಾ ಕಾರ್ಯಕ್ರಮ

ಮೈಸೂರು: ದೇಶ-ವಿದೇಶಗಳಲ್ಲಿ ಜನ ಸಮೂಹವನ್ನು ಹೊಂದಿರುವ ಅವಧೂತ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ನೂತನ ಶಾಖೆಯನ್ನು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ…

2 hours ago

ಜನವರಿ.5ಕ್ಕೆ ಮೈಸೂರು ವಿವಿ 106ನೇ ಘಟಿಕೋತ್ಸವ

ಕುಲಪತಿ ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನ ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ೧೦೬ನೇ ಘಟಿಕೋತ್ಸವವನ್ನು ಜ.೫ರಂದುನಡೆಸಲು ತೀರ್ಮಾನಿಸಲಾಗಿದ್ದು, ಘಟಿಕೋತ್ಸವ…

2 hours ago

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

2 hours ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

2 hours ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

2 hours ago