ಮೈಸೂರು: ಲೋಕ ಸಭಾ ಚುನಾವಣೆ ಹಿನ್ನೆಲೆ ಮತದಾನ ಪ್ರಮಾಣವನ್ನು ಹೆಚ್ಚುಸುವ ನಿಟ್ಟಿನಲ್ಲಿ ನಂಜನಗೂಡು ತಾಲ್ಲೂಕು ಪಂಚಾಯಿತಿಯ ಸ್ವಿಪ್ ಸಮಿತಿ ವತಿಯಿಂದ ಗ್ರಾಮೀಣ ಸೊಗಡಿನ ಶೈಲಿನಲ್ಲಿ ಎತ್ತಿನಗಾಡಿ ಜಾಥಾ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ನಂಜನಗೂಡು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ ಅವರ ಮಾರ್ಗದರ್ಶನದಂತೆ, ಬಿಳಿಗೆರೆ ಹೋಬಳಿ ಮಟ್ಟದಲ್ಲಿ ಕಳೆದ ಬಾರಿ ಮತದಾನ ಪ್ರಮಾಣ ಕಡಿಮೆ ಇರುವ ಗ್ರಾಮ ಪಂಚಾಯಿತಿಗಳಿಂದ ಸುತ್ತೂರು ಗ್ರಾಮದಲ್ಲಿ ಎತ್ತಿನ ಗಾಡಿ ಜಾಥಾ ಹಮ್ಮಿಕೊಳ್ಳಲಾಯಿತು.
ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆ ಮುಂಭಾಗದಿಂದ ಬಿಳಿಗೆರೆ ಹೋಬಳಿಯ ಎಲ್ಲಾ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಸಿಬ್ಬಂದಿ ಹಾಗೂ ಸ್ವಸಹಾಯ ಸಂಘದ ಮಹಿಳೆಯರು ಎತ್ತಿನ ಗಾಡಿ ಏರಿ ಸುತ್ತೂರಿನ ಪ್ರಮುಖ ರಸ್ತೆಗಳಲ್ಲಿ ಸಾಗಿ ಕಡ್ಡಾಯ ಮತದಾನ ಕುರಿತು ಜಾಗೃತಿ ಮೂಡಿಸಿದರು.
ಈ ವೇಳೆ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ವಿವೇಕ್, ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಕಾವ್ಯ, ಸುತ್ತೂರು, ಹೊಸಕೋಟೆ, ಬಿಳಿಗೆರೆ, ತುಂನೇರಳೆ, ನಗರ್ಲೆ ಹಾಗೂ ಕಾರ್ಯ ಗ್ರಾಮ ಪಂಚಾಯಿತಿಯ ಅಭಿವೃದ್ಧಿಗಳು, ಕಾರ್ಯದರ್ಶಿ, ತಾಲ್ಲೂಕು ಎನ್ ಅರ್.ಎಲ್ ಎಂ ನ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…