accident case Two dead
ಎಚ್.ಡಿ.ಕೋಟೆ: ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ.
ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ.
ರಾಜು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಹೊಳೆಹುಂಡಿ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ, ಮೈಸೂರು- ಮಾನಂದವಾಡಿ ಮುಖ್ಯ ರಸ್ತೆಯ ಕೋಡಳ್ಳಿ ಮರ ಬಳಿ ಎಚ್.ಡಿ.ಕೋಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ತಲೆಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.
ನಂತರ ಸ್ಥಳಕ್ಕೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ ನಂತರ ಮೃತ ದೇಹವನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು.
ವಿಚಾರ ತಿಳಿಯುತ್ತಿದ್ದಂತೆ ಶಾಸಕ ಅನಿಲ್ ಚಿಕ್ಕಮಾದು ಮೃತ ವ್ಯಕ್ತಿಯ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನಸಹಾಯ ಮಾಡಿದರು.
ಮೃತರಿಗೆ ಪತ್ನಿ, ಪುತ್ರ, ಓರ್ವ ಪುತ್ರಿ ಇದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…