ಮೈಸೂರು

H.D KOTE | ಬೈಕ್‌ಗೆ ಸಾರಿಗೆ ಬಸ್‌ ಡಿಕ್ಕಿ ; ಸ್ಥಳದಲ್ಲೇ ಸವಾರ ಸಾವು

ಎಚ್.ಡಿ.ಕೋಟೆ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನ ಮೈಸೂರು-ಮಾನಂದವಾಡಿ ಮುಖ್ಯ ರಸ್ತೆಯ ಕೋಡಿ ಅರಳಿ ಗ್ರಾಮದ ಬಳಿ ನಡೆದಿದೆ.

ತಾಲ್ಲೂಕಿನ ಹೊಳೆಹುಂಡಿ ಗ್ರಾಮದ ರಾಜು (೪೦) ಮೃತಪಟ್ಟ ಬೈಕ್ ಸವಾರ.

ರಾಜು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಹೊಳೆಹುಂಡಿ ಗ್ರಾಮಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಮೈಸೂರು- ಮಾನಂದವಾಡಿ ಮುಖ್ಯ ರಸ್ತೆಯ ಕೋಡಳ್ಳಿ ಮರ ಬಳಿ ಎಚ್.ಡಿ.ಕೋಟೆಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ತಲೆಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ನಂತರ ಸ್ಥಳಕ್ಕೆ ಎಚ್.ಡಿ.ಕೋಟೆ ಠಾಣೆ ಪೊಲೀಸರು ಬಂದು ಪರಿಶೀಲನೆ ನಡೆಸಿದ ನಂತರ ಮೃತ ದೇಹವನ್ನು ಎಚ್.ಡಿ.ಕೋಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಿ, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು.

ವಿಚಾರ ತಿಳಿಯುತ್ತಿದ್ದಂತೆ ಶಾಸಕ ಅನಿಲ್ ಚಿಕ್ಕಮಾದು ಮೃತ ವ್ಯಕ್ತಿಯ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನಸಹಾಯ ಮಾಡಿದರು.

ಮೃತರಿಗೆ ಪತ್ನಿ, ಪುತ್ರ, ಓರ್ವ ಪುತ್ರಿ ಇದ್ದಾರೆ. ಈ ಸಂಬಂಧ ಎಚ್.ಡಿ.ಕೋಟೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago