ಮೈಸೂರು

ಕೆ.ಆರ್‌.ನಗರ: ಮಾಜಿ ಸಚಿವ ಸಾ.ರಾ. ಮಹೇಶ್ ಪುತ್ರ ಹಾಗೂ ಉದ್ಯಮಿ ಸಾ.ರಾ.ಜಯಂತ್‌ ಹುಟ್ಟುಹಬ್ಬ ಆಚರಣೆ

ಭೇರ್ಯ ಮಹೇಶ್:‌ ಕೆ.ಆರ್‌.ನಗರ ತಾಲ್ಲೂಕು ವರದಿಗಾರರು 

ಕೆ.ಆರ್.ನಗರ : ಜಾತಿ ಬೇದವಿಲ್ಲದೆ ನೊಂದವರಿಗೆ ದ್ವನಿಯಾಗಿ, ಸಂಕಷ್ಟದಲ್ಲಿರುವವರುಗೆ ಆರ್ಥಿಕ ನೆರವು ನೀಡಿ, ಸೂರು ಇಲ್ಲದವರಿಗೆ ಸೂರು‌ ನೀಡಿ ಜನರ ಮನದಲ್ಲಿ ಅಚ್ಚಳಿಯದೇ ಉಳಿದಿರುವ ಮಾಜಿ ಸಚಿವರಾದ ಸಾ.ರಾ‌.ಮಹೇಶ್ ಅಣ್ಣ ಅವರ ಹಾದಿಯಲ್ಲಿ ಪುತ್ರ ಉದ್ಯಮಿ ಸಾ.ರಾ.ಜಯಂತ್ ಅವರು ಕೂಡ ಬಡವರು, ಬೀದಿಬದಿ ವ್ಯಾಪಾರಿಗಳಿಗೆ ಬೆನ್ನೆಲುಬಾಗಿದ್ದಾರೆ ಎಂದು ಪುರಸಭೆ ಮಾಜಿ ಸದಸ್ಯ ಕೆ.ಉಮೇಶ್ ಹೇಳಿದರು.

ಇಂದು ಪಟ್ಟಣದ ಗರುಡಗಂಭ ವೃತ್ತದಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್ ಅವರ ಎರಡನೇ ಪುತ್ರ ಉದ್ಯಮಿ ಸಾ.ರಾ.ಜಯಂತ್ ಅವರ ಹುಟ್ಟು ಹಬ್ಬದ ಅಂಗವಾಗಿ ಸಾ.ರಾ.ಜಯಂತ್ ಸ್ನೇಹ ಬಳಗದಿಂದ ಹಮ್ಮಿಕೊಂಡಿದ್ದ ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ಮತ್ತು 150 ಮಂದಿ ಆಟೋ ಚಾಲಕರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಸ್ವಾರ್ಥ ಸೇವೆಯೇ ಮನುಷ್ಯನಿಗೆ ನಿಜವಾದ ಆತ್ಮತೃಪ್ತಿ. ಸೇವೆ ಮಾಡಬೇಕಾದರೆ ಯಾವುದೇ ರೀತಿಯಾದಂತಹ ಮುಜುಗರವಿರಬಾರದು. ಮನ ಸಾರೆ ಮಾಡಿದಾಗ ಸಂತೋಷದೊಂದಿಗೆ ನೆಮ್ಮದಿ ಉಂಟಾಗುತ್ತದೆ ಈ ಹಾದಿಯಲ್ಲಿ ಸಾಗುತ್ತಿರುವ ನಮ್ಮ ನಾಯಕರಾದ ಮಾಜಿ ಸಚಿವ ಸಾ.ರಾ.ಮಹೇಶ್ ಅಣ್ಣನವರನ್ನು ಪಡೆದಿರುವ ನಾವುಗಳೇ ಧನ್ಯ ಎಂದು ನುಡಿದರು.

ಸಾ.ರಾ.ಮಹೇಶ್ ಅಣ್ಣನವರ ಮಕ್ಕಳು ಕೂಡ ತಂದೆಯಂತೆ ಬಡವರ, ನೊಂದವರ, ರೈತರ ಸಂಕಷ್ಟಕ್ಕೆ ಸದಾ ಮೀಡಿಯುತ್ತಿದ್ದಾರೆ. ವೈದ್ಯರಾಗಿ ಡಾ.ಸಾ.ರಾ.ಧನುಷ್ ರೋಗಿಗಳ ಮನೆ ಬಾಗಿಲಿಗೆ ಹೋಗಿ ಉಚಿತ ಚಿಕಿತ್ಸೆ ನೀಡಿ ಜೊತೆಗೆ ನೆರವು ಕೂಡ ನೀಡಿ ಜನಪ್ರಿಯತೆ ಪಡೆದು ಜನರ ಮನಸ್ಸಿನಲ್ಲಿದ್ದಾರೆ ಎಂದು ಕೊಂಡಾಡಿದರು.

ಇನ್ನೂ ಉದ್ಯಮಿಯಾಗಿರುವ ಸಾ.ರಾ.ಜಯಂತ್ ಕೂಡ ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲೂಕಿನ ಜನರ ಸಂಕಷ್ಟಕ್ಕೆ ನೆರವಾಗಿದ್ದಾರೆ, ಇಂದು ಸಾ.ರಾ.ಜಯಂತ್ ಹುಟ್ಟು ಹಬ್ಬ ಆದರೆ ಅವರು ಸಮಾಜ ಮುಖಿಯಾಗಿ ತನ್ನ ಹುಟ್ಟು ಹಬ್ಬವನ್ನು ಆಚರಿಸಿ ಕೊಳ್ಳುತ್ತಿರುವುದು ಶ್ಲಾಘನೀಯ ಎಂದರು.

ನಾವೆಲ್ಲ ನೋಡುತ್ತಿದ್ದೇವೆ ಎಂತಹ ಘಟಾನುಘಟಿಗಳು ಅವರ ಮಕ್ಕಳು ರೆಸಾರ್ಟ್, ಫೈವ್ ಸ್ಟಾರ್ ಹೋಟೆಲ್ ಹಾಗೂ ವಿದೇಶಕ್ಕೆ ಹೋಗಿ ತಮ್ಮ ಹುಟ್ಟು ಹಬ್ಬವನ್ನು ಸಂಬ್ರಮದಿಂದ ಆಚರಿಸಿ ಕೊಳಗಳ್ಳುತ್ತಾರೆ ಆದರೆ ಸಾ.ರಾ.ಮಹೇಶ್ ಅಣ್ಣ ಸೇರಿದಂತೆ ಅವರ ಮಕ್ಕಳು‌ ಕೂಡ ಜನರ ಮದ್ಯೆ ಹುಟ್ಟು ಹಬ್ಬವನ್ನು ಆಚರಣೆ ಮಾಡಿ ಕೊಂಡು ಬರುತ್ತಿದ್ದಾರೆ ಇದಲ್ಲವೇ ಜನಪ್ರಿಯತೆ ಎಂದು ತಿಳಿಸಿದರು.

ಕೆ.ಆರ್.ನಗರ ಪಟ್ಟಣದಲ್ಲಿ ಉದ್ಯಮಿ ಸಾ.ರಾ.ಜಯಂತ್ ಹುಟ್ಟು ಹಬ್ಬದ ಸಂಭ್ರಮಾಚರಣೆಯನ್ನು ಸಾ.ರಾ.ಜಯಂತ್ ಸ್ನೇಹ ಬಳಗದಿಂದ ನಗರ ಯುವ ಜೆಡಿಎಸ್ ಅಧ್ಯಕ್ಷ ವಿಕಾಸ್(ವಿಕ್ಕಿ) ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

6 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

8 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

9 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

12 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

13 hours ago