ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ನವೆಂಬರ್ 13 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಯಾರೇ ಆಗಿರಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಸಲುವಾಗಿ ನಾವೆಲ್ಲರೂ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಅಧ್ಯಕ್ಷ ರಾಜೀನಾಮೆ ನೀಡುವ ಬಗ್ಗೆ ನನಗೆ ಇನ್ನೂ ಮಾಹಿತಿ ದೊರೆತಿಲ್ಲ. ಆದರೆ, ಸರ್ಕಾರ ಈಗಾಗಲೇ ಮುಡಾದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅವ್ಯವಸ್ಥೆಯನ್ನು ಸ್ವಚ್ಛ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೀಗಾಗಿ ಕೆಂಪಣ್ಣ ಆಯೋಗ ರಚಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮುಡಾದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದರು.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…