ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ನವೆಂಬರ್ 13 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಯಾರೇ ಆಗಿರಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಸಲುವಾಗಿ ನಾವೆಲ್ಲರೂ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಅಧ್ಯಕ್ಷ ರಾಜೀನಾಮೆ ನೀಡುವ ಬಗ್ಗೆ ನನಗೆ ಇನ್ನೂ ಮಾಹಿತಿ ದೊರೆತಿಲ್ಲ. ಆದರೆ, ಸರ್ಕಾರ ಈಗಾಗಲೇ ಮುಡಾದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅವ್ಯವಸ್ಥೆಯನ್ನು ಸ್ವಚ್ಛ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೀಗಾಗಿ ಕೆಂಪಣ್ಣ ಆಯೋಗ ರಚಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮುಡಾದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…