ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ನವೆಂಬರ್ 13 ರಂದು ರಾಜ್ಯದಲ್ಲಿ ಉಪ ಚುನಾವಣೆ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಯಾರೇ ಆಗಿರಲಿ ಅವರನ್ನು ಗೆಲ್ಲಿಸಿಕೊಂಡು ಬರುವ ಸಲುವಾಗಿ ನಾವೆಲ್ಲರೂ ಹೋಗಿ ಪ್ರಚಾರ ಮಾಡುತ್ತೇವೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಮುಡಾ ಅಧ್ಯಕ್ಷ ಮರಿಗೌಡ ರಾಜೀನಾಮೆಗೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾ ಅಧ್ಯಕ್ಷ ರಾಜೀನಾಮೆ ನೀಡುವ ಬಗ್ಗೆ ನನಗೆ ಇನ್ನೂ ಮಾಹಿತಿ ದೊರೆತಿಲ್ಲ. ಆದರೆ, ಸರ್ಕಾರ ಈಗಾಗಲೇ ಮುಡಾದಲ್ಲಿ ನಡೆದಿರುವ ಅವ್ಯವಹಾರ ಹಾಗೂ ಅವ್ಯವಸ್ಥೆಯನ್ನು ಸ್ವಚ್ಛ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೀಗಾಗಿ ಕೆಂಪಣ್ಣ ಆಯೋಗ ರಚಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಮುಡಾದಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಕ್ರಮವಹಿಸಲಾಗುವುದು ಎಂದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…