ಮೈಸೂರು: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಾಗಿರುವ ವೇಳೆಯೇ ಬಿಜೆಪಿ ಪ್ರತಿನಿತ್ಯ ಒಂದಿಲ್ಲೊಂದು ನೂತನ ಸ್ಕೀಂಗಳೊಂದಿಗೆ ಮತದಾರರನ್ನು ಸೆಳೆಯಲು ಮುಂದಾಗುತ್ತಿದೆ. ಅದರಂತೆಯೇ ಇಂದು(ಏ.೨೧) ಮೈಸೂರಿನಲ್ಲಿ “ಬಿಜೆಪಿ ಮಹಾಸಂಪರ್ಕ ಅಭಿಯಾನ”ಕ್ಕೆ ಚಾಲನೆ ದೊರೆತಿದೆ.
ನಗರದ ಚಾಮರಾಜ ಕ್ಷೇತ್ರದ ವಾರ್ಡ್ ನಂ. 232 ಮತ್ತು 233 ವಾರ್ಡ್ಗಳಲ್ಲಿ ಕರ ಪತ್ರ ಹಂಚುವ ಮೂಲಕ ಮಹಾಸಂಪರ್ಕ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಚಾಲನೆ ನೀಡಿದರು.
ಬಳಿಕ ಮನೆ ಮನೆಗೆ ತೆರಳಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಪರವಾಗಿ ಮತ ಯಾಚಿಸಿದರು. ಇವರಿಗೆ ಜೊತೆಯಾಗಿ ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ ಸೇರಿದಂತೆ ಮೈಸೂರಿನ ಹಲವು ಬಿಜೆಪಿ ಮುಖಂಡರು ವಿಜಯೇಂದ್ರಗೆ ಸಾಥ್ ನೀಡಿದರು.
ಮಹಾಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಅಪಘಾತಕ್ಕೀಡಾಗಿ, ಮೈಸೂರು ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಚನ್ನರಾಜು ಅವರ ಕುಶಲೋಪಾಯ ವಿಚಾರಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…