ಮೈಸೂರು

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತ ನಡೆಸಿದ ಕಾರು ಪರಾರಿಯಾಗಿದ್ದು, ಘಟನೆಯ ನಂತರ ಪೊಲೀಸರು ಇನ್ನೂ ಕಾರನ್ನು ಪತ್ತೆ ಹಚ್ಚದಿರುವುದಕ್ಕೆ ಸ್ಥಳೀಯರು ಆಕ್ರೋಶಗೊಂಡಿದ್ದರು.

ಸೋಮವಾರ ಸಂಜೆ ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಜಮಾಯಿಸಿದ ನೂರಾರು ಸ್ಥಳೀಯರು, “ಅಪಘಾತ ಮಾಡಿದ ಕಾರನ್ನು ತಕ್ಷಣ ಪತ್ತೆ ಹಚ್ಚಿ, ಆರೋಪಿಯನ್ನು ಬಂಧಿಸಿ” ಎಂದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಮೈಸೂರು-ಮಡಿಕೇರಿ ಹೆದ್ದಾರಿಯನ್ನು ಸುಮಾರು ಅರ್ಧ ಗಂಟೆ ಕಾಲ ತಡೆಹಿಡಿದಿದ್ದರಿಂದ ಎರಡು ದಿಕ್ಕಿನಲ್ಲೂ ವಾಹನಗಳು ಸಾಲುಗಟ್ಟಿ ನಿಂತು ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.

ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದ ಪೊಲೀಸರು, ಸಿಸಿ ಕ್ಯಾಮೆರಾಗಳನ್ನು ತ್ವರಿತವಾಗಿ ಸರಿಪಡಿಸುವುದಾಗಿ ಮತ್ತು ಅಪಘಾತಕ್ಕೆ ಸಂಬಂಧಿಸಿದ ತನಿಖೆಯನ್ನು ತೀವ್ರಗೊಳಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನಾಕಾರರು ಪ್ರತಿಭಟನೆ ಕೈಬಿಟ್ಟು ರಸ್ತೆ ತೆರವುಗೊಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

25 mins ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

2 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

8 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

8 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

9 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

9 hours ago